LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಕೇಸ್ ಬೆದರಿಕೆ: ಪ್ರತಿಭಟನೆ ವೇಳೆ ಪೊಲೀಸ್ ವರ್ತನೆಗೆ ಆಕ್ರೋಶ

ಮುಂಬೈ, ಜುಲೈ 23: ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹೊಸದಿಲ್ಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ದೇಶದ ವಿವಿಧ ಭಾಗಗಳಲ್ಲೂ ಹೋರಾಟ ತೀವ್ರಗೊಂಡಿದೆ. ಈ ನಡುವೆ ಮುಂಬೈನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ವೇಳೆ ಪೊಲೀಸ್ ವಾಹನದಲ್ಲಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಪೊಲೀಸ್ ಅಧಿಕಾರಿ, "ಮತ್ತೆ ಇಲ್ಲಿ ಕಾಣಿಸಿಕೊಂಡರೆ ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್‌ ಇಟ್ಟು ಪ್ರಕರಣ ದಾಖಲಿಸುತ್ತೇನೆ. ನಿಮ್ಮ ಜೀವನವೇ ಹಾಳಾಗುತ್ತದೆ. ಜಾಮೀನು ಕೂಡ ಸಿಗುವುದಿಲ್ಲ" ಎಂದು ಹಿಂದಿಯಲ್ಲಿ ಬೆದರಿಕೆ ಹಾಕಿರುವುದು ಕೇಳಿಬಂದಿದೆ.

ಆದರೆ, ಈ ವಿಡಿಯೊದ ಸತ್ಯಾಸತ್ಯತೆ, ಅದು ಚಿತ್ರೀಕರಿಸಲಾದ ದಿನಾಂಕ ಅಥವಾ ನಿಖರ ಸ್ಥಳವನ್ನು ಸ್ವತಂತ್ರವಾಗಿ ದೃಢೀಕರಿಸಲು ಸಾಧ್ಯವಾಗಿಲ್ಲ.

ಈ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಈ ಮಟ್ಟಕ್ಕೆ ಇಳಿದಿರುವುದು ಪ್ರಜಾಪ್ರಭುತ್ವದ ಮೇಲೆ ಬಿದ್ದ ಕಪ್ಪು ಚುಕ್ಕೆ ಎಂದು ಟೀಕಿಸಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಬುಧವಾರ ಮುಂಬೈನ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಚೆಂಬೂರಿನ ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದ ಬಳಿ ಜಮಾಯಿಸಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದರು.

ದಾದರ್‌ನ ಶಿವಸೇನಾ ಭವನದ ಎದುರಲ್ಲಿಯೂ ಬೃಹತ್ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಶುದ್ಧ ಪೆಟ್ರೋಲ್ ಮರುಪೂರೈಕೆ ಇಲ್ಲ; ಇ–20 ಮುಂದುವರಿಕೆನೀಟ್‌ ಅಕ್ರಮ ವಿರುದ್ಧ ಮಹಾರಾಷ್ಟ್ರ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ; ಸಾವಿರಾರು ಕಾರ್ಯಕರ್ತರ ವಶ, ಹಲವು ಕಡೆ ಪ್ರತಿಭಟನೆಪ್ರಧಾನಿ ನಿವಾಸದ ಪ್ರತಿಭಟನೆ ಬದಲು ವಿದ್ಯಾರ್ಥಿಗಳ ಜೊತೆ ನಿಲ್ಲಬೇಕಿತ್ತು: ಕಾಂಗ್ರೆಸ್ ನಡೆ ಬಗ್ಗೆ ವಾಂಗಚುಕ್‌ ಪತ್ನಿ ಟೀಕೆಸಿಜೆಪಿ ಪ್ರತಿಭಟನೆಗೆ ಅಡ್ಡಿಪಡಿಸಲು ಬಿಜೆಪಿಯಿಂದ ‘ಗೂಂಡಾಗಳ’ ಬಳಕೆ: ಅಭಿಜೀತ ದೀಪ್ಕೆ ಆರೋಪನೀಟ್ ವಿವಾದಕ್ಕೆ ಉಭಯ ಸದನ ಕಲಾಪ ನಾಲ್ಕನೇ ದಿನವೂ ಮುಂದೂಡಿಕೆಮಳೆ ಹನಿಗಳೊಂದಿಗೆ ಅರಳಿದ ಅಳ್ನಾವರ: ಹಸಿರಿನ ಸೊಬಗು, ರೈತರ ಸಂಭ್ರಮಪ್ರಧಾನಿ ನಿವಾಸದ ಎದುರಿನ ಪ್ರತಿಭಟನೆ ಖಂಡಿಸಿ ಬಿಜೆಪಿಯಿಂದ ಮೆರವಣಿಗೆಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಬೆಳಗಾವಿಯ ಸ್ವಾತಿಕ್ ಪಾಟೀಲ ಆಯ್ಕೆನೀಟ್‌ ಅಕ್ರಮ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಪ್ರಧಾನ್‌ ರಾಜೀನಾಮೆಗೆ ಆಗ್ರಹವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್ ವ್ಯಾನ್‌ ತಡೆದ ಯುವತಿ; ರಿಯಾ ಅಹಿರ್‌ ಧೈರ್ಯಕ್ಕೆ ಮೆಚ್ಚುಗೆ