LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯುತ್ ಅವಘಡ : ತಂದೆ, ಪುತ್ರನ ಸಾವು

ಬೈಲಹೊಂಗಲ, 1-  ಮನೆ ಮುಂದಿನ ಕಸ ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗ ದಾರುಣವಾಗಿ ಅಸುನೀಗಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಉಡಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.



71 ವರ್ಷದ ಪ್ರಭಾಕರ ಹುಂಬಿ ಮತ್ತು 31 ವರ್ಷದ ಅವರ ಮಗ ಮಂಜುನಾಥ ಹುಂಬಿ ಮೃತಪಟ್ಟವರು. ಪ್ರಭಾಕರ ಬೆಳಿಗ್ಗೆ ದನದ ಕೊಟ್ಟಿಗೆಗೆ ಹೋಗಿ ಆಕಳಿಗೆ ಹುಲ್ಲು ನೀಡಿದ್ದಾರೆ. ನಂತರ ಮನೆಯ ಮುಂದಿನ ಜಾಗದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾಗ ವಿದ್ಯುತ್ ಕಂಬಕ್ಕೆ ಸಪೋರ್ಟ ಆಗಿ ನಿಲ್ಲಿಸಿದ್ದ ಕಂಬವನ್ನು ಸ್ಪರ್ಶಿಸಿದ್ದಾರೆ. ಆ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು.



ಗುರುವಾರ ರಾತ್ರಿ ಮಳೆಯಾಗಿದ್ದ ಕಾರಣ ವಿದ್ಯುತ್ ಕಂಬಕ್ಕೆ ಸಪೋರ್ಟ ಆಗಿ ಹಾಕಿದ್ದ ತಂತಿಗೆ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.  ಬೆಳಿಗ್ಗೆ ಎದ್ದು ಮನೆಯ ಮುಂದೆ ಬೆಳೆದಿದ್ದ ಹುಲ್ಲು ಕೀಳುವಾಗ ತಂದೆ ಶಾಕ್ ಹೊಡೆದು ಪಕ್ಕದ ಕಾಲುವೆಯಲ್ಲಿ ಬಿದ್ದು ಒದ್ದಾಡುವಾಗ ಫಿಟ್ಸ ಬಂದಿರಬಹುದು ಎಂದು ಓಡಿ ಬಂದ ಮಗ ಅದೇ ತಂತಿ ಹಿಡಿದು ತಂದೆಯನ್ನು ಮೇಲಕ್ಕೆ ಎಬ್ಬಿಸಲು ಹೋಗಿ ಆತನೂ ಪ್ರಾಣ ಬಿಟ್ಟಿದ್ದಾನೆ. ಪ್ರಭಾಕರ ಸ್ಥಳದಲ್ಲೇ ಮೃತರಾದರೆ ಮಗ ಮಂಜುನಾಥ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.



ಪೊಲೀಸ ವರಿಷ್ಠ ಸಂಜೀವ ಪಾಟೀಲ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದರು. ಇಲ್ಲಿ ಹೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ ಎದ್ದು ಕಾಣುತ್ತದೆ. ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊಣೆ ಮಾಡಿ ದೂರು ದಾಖಲಿಸಿಕೊಳ್ಳುವಂತೆ ಸ್ಥಳದಲ್ಲಿದ್ದ ಸಿಪಿಐಗೆ ಸೂಚನೆ ನೀಡಿದರು.



ಜಿಲ್ಲಾಧಿಕಾರಿ ಹಾಗೂ ಶಾಸಕರೊಂದಿಗೆ ಮಾತನಾಡಿದ್ದು, ಸಂತ್ರಸ್ತ ಕುಟುಂಬಕ್ಕೆ ಸರಕಾರದ ಸಹಾಯ ಒದಗಿಸಲು ಕ್ರಮ ಕೈಗೊಳ್ಳಲು ಭರವಸೆ ನೀಡಿದರು. ಹೆಸ್ಕಾಂನ ಒಂದು ತಂಡ ಗ್ರಾಮಕ್ಕೆ ಬರಲಿದ್ದು, ಜೋತು ಬಿದ್ದ ತಂತಿಗಳನ್ನು ಕಟ್ ಮಾಡಿ ಸರಿಪಡಿಸಲಿದ್ದಾರೆ. ಗ್ರಾಮದಲ್ಲಿ ಎಲ್ಲ ಕಡೆಗಳಲ್ಲಿ ವಿದ್ಯುತ್  ತಂತಿಗಳ ದುರಸ್ತಿ ಮಾಡಲಿದ್ದಾರೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು