LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಲ್ಲು ತೂರಾಟ, ತಲ್ವಾರ್ ಝಳಪಿಸಿದವರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಶಹಾಪುರದ ಮರಾಠಾ ವಿದ್ಯಾಮಂದಿರ ಶಾಲೆಯ ಮೈದಾನದಲ್ಲಿ ಗುರುವಾರ ಸಂಜೆ ಎರಡು ಅಪ್ರಾಪ್ತ ವಯಸ್ಸಿನ ತಂಡ ಕ್ರಿಕೆಟ್ ಮ್ಯಾಚ್ ಆಡಿದೆ. ತುರುಸಿನಿಂದ ನಡೆದ ಪಂದ್ಯದಲ್ಲಿ ಗೆದ್ದ ತಂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ, ಸೋತ ತಂಡ ಅವರ ಮೇಲೆ ಹಲ್ಲೆ ಮಾಡಿದೆ. ಆಗ ಅಲ್ಲಿಯೇ ಇದ್ದ ಹಿರಿಯರೂ ಹೊಡೆದಾಟದಲ್ಲಿ ಭಾಗಿಯಾಗಿದ್ದರು.



ಅಷ್ಟಕ್ಕೇ ಮುಗಿದಿದ್ದ ಹೊಡೆದಾಟ ಸಂಜೆ ಸುಮಾರು

6.30 ಗಂಟೆಗೆ ತಾವು ವಾಸವಾಗಿರುವ ಅಳವಣ ಗಲ್ಲಿಯಲ್ಲೂ ಮುಂದುವರೆದು ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಒಂದು ಕೋಮಿನ ಯುವಕರು ಇನ್ನೊಂದು ಕೋಮಿನವರ ಮನೆಗಳಿಗೆ ಕಲ್ಲೆಸೆದಿದ್ದಾರೆ. ಎರಡೂ ಗುಂಪಿನವರು ತಲವಾರ್ ಮುಂತಾದ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದು ಆಗ ಸ್ಥಳಕ್ಕೆ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಓರ್ವ ಪೇದೆ ಆಗಮಿಸಿದ್ದಾರೆ. ಅದನ್ನು ಕಂಡು ಎಲ್ಲರೂ ಪಲಾಯನಗೈದಿದ್ದಾರೆ. ಆಗ ಓರ್ವ ತನ್ನ ತಲವಾರ್ ರಸ್ತೆಗೆ ಎಸೆದಿದ್ದಾನೆ.



ಕಲ್ಲು ತೂರಾಟದಲ್ಲಿ ನಿರತರಾಗಿದ್ದವರ ಮತ್ತು ತಲವಾರ್ ಪ್ರದರ್ಶಿಸಿದ್ದವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ  ಐಪಿಸಿ ಸೆಕ್ಷನ್ 143, 147,148, 323, 324, 354, 504, 506, 153a ಮತ್ತು 149-ರಡಿ ಪ್ರಕರಣ ದಾಖಲಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ