LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕೆಇಬಿ ವಿದ್ಯುತ್ ಕೇಂದ್ರಕ್ಕೆ ಬೆಂಕಿ ; ೨-೩ ದಿನ ವಿದ್ಯುತ್ ವ್ಯತ್ಯಯ

ಅಥಣಿ : ಅಥಣಿಯ 110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ ಸಂಭವಿಸಿ, ಬೆಂಕಿ ತನ್ನ ಕೆನ್ನಾಲಿಗೆ ಚಾಚಿ ಇಡೀ ವಿದ್ಯುತ್ ಕೇಂದ್ರವನ್ನೇ ವ್ಯಾಪಿಸುವಷ್ಟು ಜ್ವಾಲೆ ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿತ್ತು.



ಅಥಣಿ ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ ಸುಮಾರು 09:15 ಕ್ಕೆ ಬೆಂಕಿ ಹತ್ತಿದ್ದು , ಆಯಿಲ್ ಸೋರಿಕೆಯಿಂದ ಬೆಂಕಿ ಹತ್ತಿ ಉರಿದಿರಬಹುದು ಎಂದು ಅಧಿಕಾರಿ ಶಂಕೆ ವ್ಯಕ್ತಪಡಿಸಿದ್ದಾರೆ .



ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕೋಟ್ಯಾಂತರ ರೂ ಮೌಲ್ಯದ ಟ್ರಾನ್ಸಫಾರ್ಮರ್ ಆದಿ ವಸ್ತುಗಳು ಸುಟ್ಟುಕರಕಲಾಗಿವೆ. ಬೆಂಕಿ ಆರಿಸಲು ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಅಕ್ಕ ಪಕ್ಕ ಯಾವುದೇ ಮನೆ ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ.



ಬೆಂಕಿ ಅವಘಡದಿಂದ ಸುಮಾರು ಎರಡು ಮೂರು ದಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗುವ ಸಂಭವವಿದ್ದು ಮುಖ್ಯವಾಗಿ ಯಕ್ಕಚ್ಚಿ , ಅಥಣಿ ಗ್ರಾಮೀಣ , ಗುಂಡೆವಾಡಿ , ಮಸರಗುಪ್ಪಿ , ತಂಗಡಿ , ಕಟಗೇರಿ , ಬಸವನಗುಡಿ , ಬಡಚಿ, ಮಿನಿ ವಿಧಾನಸೌದಾ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಅಧಿಕಾರಿಗಳು ತಿಳಿಸಿದರು.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ