LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಅಗ್ನಿವೀರರು ದೇಶ ಸೇವೆಗೆ ಸಜ್ಜು

ಬೆಳಗಾವಿ, 5- ನಗರದ‌ ಮರಾಠಾ ಲಘು ಪದಾತಿ‌ ದಳದಲ್ಲಿ ತರಬೇತಿ ಪೂರ್ಣಗೊಳಿಸಿರುವ ಅಗ್ನಿವೀರ ಮೊದಲ ತಂಡದ ನಿರ್ಗಮನ ಪಥಸಂಚಲನ ಶನಿವಾರ ಮುಂಜಾನೆ ತರಬೇತಿ ಕೇಂದ್ರದಲ್ಲಿ ಜರುಗಿತು. ಸುರಿಯುತ್ತಿದ್ದ ಮಳೆಯಲ್ಲಿ ನೆನೆದು ಪ್ರಶಿಕ್ಷಣಾರ್ಥಿಗಳು ಪಥಸಂಚಲನ ನಡೆಸಿದರು.



ಎಂ .ಎಲ್.ಐ.ಆರ್. ಕೇಂದ್ರದಲ್ಲಿ 31 ವಾರಗಳ ಕಾಲ ತರಬೇತಿ ಪಡೆದ 111 ಅಗ್ನಿವೀರರು ದೇಶ ಕಾಯಲು ಸಿದ್ದರಾಗಿದ್ದಾರೆ. ಅಗ್ನಿ ವೀರರ ನಿರ್ಗಮನ ಪಥಸಂಚಲನ ಗಮನಸೆಳೆಯಿತು. ತರಬೇತಿ ಮುಗಿಸಿದ ಅಗ್ನಿವೀರರು ದೇಶಸೇವೆಗೆ ಸಮರ್ಪಣೆಗೊಂಡರು.



31 ವಾರಗಳ ಕಾಲ ತರಬೇತಿಯಲ್ಲಿ ಪಡೆದ ಕೌಶಲ,‌ ಕಸರತ್ತುಗಳನ್ನು ಅವರು ಮಳೆಯಲ್ಲೇ ಪ್ರದರ್ಶಿಸಿದರು. ಮಳೆ ಮಧ್ಯೆಯೂ ಶಿಬಿರಾರ್ಥಿಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.



ಜ್ಯೂನಿಯರ್ ಲೀಡರ್ಸ ವಿಂಗ್ ಕಮಾಂಡರ್, ವಿಎಸ್ ಮೇಜರ್ ಜನರಲ್ ಆರ್.ಎಸ್. ಗುರಯ್ಯ ಅವರು ಅಗ್ನಿವೀರರನ್ನು ಉದ್ದೇಶಿಸಿ ಮಾತನಾಡಿದರು. ಐಆರ್ ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜಯದೀಪ್ ಮುಖರ್ಜಿ ಸೇರಿದಂತೆ ಅಧಿಕಾರಿಗಳು ಹಾಗೂ ಸೈನಿಕರ ಕುಟುಂಬಸ್ಥರ ಇದ್ದರು.







Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ