LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗೋಕಾಕ, ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ

ಗೋಕಾಕ : ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಪ್ರವಾಹದಿಂದ ಗೋಕಾಕ ನಗರದ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.



[video width="640" height="352" mp4="https://samadarshi.net/oorsoafi/2022/09/VID-20220912-WA0038.mp4"][/video]



ಎರಡು ದಿನಗಳಿಂದ ಘಟಪ್ರಭಾ, ಮಾರ್ಕಂಡೇಯ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಹಿಡಕಲ್ ಜಲಾಶಯ, ಧುಪದಾಳ ಮತ್ತು ಬಳ್ಳಾರಿ ನಾಲಾ ಜಲಾಶಯಗಳಿಂದ ಘಟಪ್ರಭಾ ನದಿಗೆ ನೀರು ಬಿಡಲಾಗುತ್ತಿದೆ. ಒಟ್ಟು 49 ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಹರಿದು  ಬಂದು ಗೋಕಾಕದ ಹಳೆಯ ದನಗಳ ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿದೆ.



ಈಗಾಗಲೇ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಆರೇಳು ಸೇತುವೆಗಳು ಮುಳುಗಡೆಯಾಗಿದ್ದು, ಜನರು ಘಟಪ್ರಭಾ ನದಿ ದಡದ ಗ್ರಾಮಗಳ ಗ್ರಾಮಸ್ಥರು ಜಾಗರೂಕರಾಗಿರಬೇಕೆಂದು ಸಂಸತ್ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ.



[video width="640" height="352" mp4="https://samadarshi.net/oorsoafi/2022/09/VID-20220912-WA0039.mp4"][/video]



ಹೊರಹರಿವು ಹೆಚ್ಚಿಸಿದರೆ ಪ್ರವಾಹವೂ ಹೆಚ್ಚಾಗಲಿದೆ. ಜತ್ತ– ಜಾಂಬೋಟಿ ಅಂತರರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆ ಯಾವುದೇ ಕ್ಷಣದಲ್ಲಿ ಮುಳುಗುವ ಭೀತಿ ಎದುರಾಗಿದ್ದು. ತಾಲ್ಲೂಕು ಆಡಳಿತದಿಂದ ಪರಿಶೀಲನೆ ನಡೆಸಲಾಗಿದೆ.



ಬೆಳಗಾವಿ ಜಿಲ್ಲೆಯ ಬಹುಪಾಲು ಕಡೆ ಸೋಮವಾರ ಕೂಡ ಧಾರಾಕಾರ ಮಳೆ ಮುಂದುವರಿದಿದೆ. ಚಿಕ್ಕೋಡಿ, ರಾಮದುರ್ಗ, ನಿಪ್ಪಾಣಿ ಹಾಗೂ ಖಾನಾಪುರ ತಾಲ್ಲೂಕುಗಳ ಒಟ್ಟು 20ಕ್ಕೂ ಹೆಚ್ಚು ಸೇತುವೆಗಳ ಮೇಲೆ ನದಿ ನೀರು ಹರಿಯುತ್ತಿದ್ದು, ಸಂಚಾರ ಬಂದ್ ಆಗಿದೆ.



ನವೀಲುತೀರ್ಥ ಜಲಾಶಯದಿಂದ ಕೂಡ ಮಲಪ್ರಭಾ ನದಿಗೆ 12.5 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮುನವಳ್ಳಿ ಪಟ್ಟಣದೊಳಗಿನ ಹಳೆ ಸೇತುವೆ ಮುಳುಗಡೆಯಾಗಿದೆ. ರಾಮದುರ್ಗ ತಾಲ್ಲೂಕಿನ ನದಿ ತೀರದ ಗ್ರಾಮಗಳಲ್ಲಿ ಜನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ