LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ 

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಭೀಮಾನದಿ ಉಕ್ಕಿ ಹರಿಯುತ್ತಿದ್ದು, ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ನದಿಗೆ 1 ಲಕ್ಷ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಬ್ರಿಡ್ಜ ಕಂ ಬ್ಯಾರೇಜ್ ಮುಳುಗಡೆಯಾಗಿದೆ.



ಜಿಲ್ಲೆಯ ಚಡಚಣ, ಇಂಡಿ, ಆಲಮೇಲ ತಾಲೂಕಿನಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಖಾನಾಪುರ-ಪಡನೂರು, ಶಿರನಾಳ ಸೇರಿದಂತೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಬಂದ್ ಆಗಿದೆ.



ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಉಜಿನಿ ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಯಲ್ಲಮ್ಮ ದೇಗುಲ ಸಂಪೂರ್ಣ ಜಲಾವೃತಗೊಂಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST