LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗೋಕಾಕದ ಮಾಜಿ ಶಾಸಕ ಚಂದ್ರಶೇಖರ ಗುಡ್ಡಕಾಯು ನಿಧನ

ಬೆಳಗಾವಿ, ಮೇ 21:  ಗೋಕಾಕದ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.



ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು.

ಚಂದ್ರಶೇಖರ ಗುಡ್ಡಕಾಯು ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.



ಕೆಲ ತಿಂಗಳ ಹಿಂದೆ ಚುನಾವಣೆ ನೆನಪು ಮೆಲುಕು ಹಾಕಿದ್ದ ಚಂದ್ರಶೇಖರ ಗುಡ್ಡಕಾಯು :



ನಾನು ಚುನಾವಣೆಗೆ ಖರ್ಚೇ ಮಾಡಿರಲಿಲ್ಲ. ಎಲ್ಲಾ ಮಾಡಿದ್ದು, ನೋಡಿಕೊಂಡಿದ್ದು ವಸಂತರಾವ ಅಣ್ಣಾ ಎಂದು ಗೋಕಾಕದ ಮಾಜಿ ಶಾಸಕ ಚಂದ್ರಶೇಖರ ಗುಡ್ಡಾಕಾಯು ಕೆಲ ತಿಂಗಳುಗಳ ಹಿಂದೆ ಅವರು ತಮ್ಮ ಚುನಾವಣೆಯ ಅನುಭವ ಹೇಳಿದ್ದರು.



1972 ರಲ್ಲಿ ಗೋಕಾಕದಿಂದ ಆಯ್ಕೆಯಾಗಿದ್ದ ಅವರು, ಅದಕ್ಕೂ ಮೊದಲು ಮಹಾರಾಷ್ಟ್ರ ಸರಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ದಿ.ಶಂಕರರಾವ ಚವ್ಹಾಣರಿಗೆ ಆಪ್ತ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಅವರನ್ನು ಬಿಡಿಸಿಕೊಂಡು ಬಂದ ರಾಯಬಾಗದ ವಸಂತರಾವ ಅಣ್ಣಾ ಗೋಕಾಕದಿಂದ ಚುನಾವಣೆಗೆ ನಿಲ್ಲಿಸಿದರು, ಆರಿಸಿ ಬಂದೆ ಎಂದು ಸ್ಮರಿಸಿಕೊಂಡಿದ್ದರು.



"ನನ್ನನ್ನು ಮಂತ್ರಿ ಮಾಡಲು ಮುಂದೆ ಬಂದ್ರು ದೇವರಾಜ ಅರಸ್ರು. ಒಲ್ಲೆಯಪ್ಪ ಮಾಡೋದಿದ್ರೆ ವಸಂತರಾವ ಅವರನ್ನೇ ಮಾಡ್ರಿ” ಎಂದೆ. ಅವರೇ ಮಂತ್ರಿ ಆದರು ಎಂದು ಅವರು ಅಂದಿನ ಘಟನೆ ಮೆಲುಕು ಹಾಕಿದ್ದರು.



1972 ರಲ್ಲಿ ಗುಡ್ಡಾಕಾಯು ಅವರು 28,005 ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಸಂಸ್ಥಾ ಕಾಂಗ್ರೆಸ್ಸಿನ ಬಿ.ಎಮ್.ಪಾಟೀಲರು 11144 ಮತ ಪಡೆದಿದ್ದರು. 1978 ರಲ್ಲಿ ನಾನು, ವಸಂತರಾವ ಸೇರಿಯೇ ಗೋಕಾಕ ಮತ್ತು ಅರಭಾವಿಗಳಲ್ಲಿ ಸೋತೆವು ಎಂದು ಗುಡ್ಡಾಕಾಯು ಹೇಳಿದ್ದರು. ಕಾಂಗ್ರೆಸ್ ಇಬ್ಬಾಗವಾಗಿ ರೆಡ್ಡಿ ಕಾಂಗ್ರೆಸ್ಸಿನಿಂದ ಇವರಿಬ್ಬರೂ ಪರಾಭವಗೊಂಡಿದ್ದರು. ಮಾಜಿ ಶಾಸಕರಾದ ಮೇಲೆ ಗುಡ್ಡಾಕಾಯು ಅವರು ಬೆಳಗಾವಿಯ ಮಹಾಂತೇಶ ನಗರದಲ್ಲಿ ವಾಸಿಸುತ್ತಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು