LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಮತೀರ್ಥನಗರದಲ್ಲಿ ಬಸ್ ನಿಲುಗಡೆಗೆ ಮನವಿ

ಬೆಳಗಾವಿ, ಡಿ. 31: ರಾಮತೀರ್ಥನಗರದ ಕಾರ್ಯಸಿದ್ದಿ ಆಂಜನೇಯಸ್ವಾಮಿ ದೇವಸ್ಥಾನದ 1 ನೇ ಹಂತ ಮತ್ತು ಪ್ರತೀಕ್ಷಾ ಹೋಟೆಲ್ ಹತ್ತಿರದ 2 ನೇ ಹಂತದಲ್ಲಿ ಎಲ್ಲ ಸಾರಿಗೆ ಬಸ್ಸುಗಳನ್ನು ವಿನಂತಿ ಮೇರೆಗೆ ಕಡ್ಡಾಯವಾಗಿ ನಿಲ್ಲಿಸಲೇಬೇಕೆಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.



ಬುಧವಾರ ಇಲ್ಲಿನ ರಹವಾಸಿಗಳು ಸಾರಿಗೆ ಸಂಸ್ಥೆಯ ಅಧೀಕ್ಷಕಿ ವಿಜಯಲಕ್ಷ್ಮಿ ಅವರಿಗೆ ವಿನಂತಿ ನಿಲುಗಡೆ ಕೋರಿಕೆಯ ಮನವಿ ಸಲ್ಲಿಸಿ, ಈ ಬೇಡಿಕೆ ಮಾಡಿದರು.



2012 ರಲ್ಲಿ ಸಂಸದ ಸುರೇಶ ಅಂಗಡಿ ಅವರ ಸೂಚನೆ ಮೇರೆಗೆ ಜನರ ಅನುಕೂಲಕ್ಕೆ ಸಾರಿಗೆ ಸಂಸ್ಥೆ 1ನೇ ಹಂತ ಮತ್ತು 2ನೇ ಹಂತಗಳಲ್ಲಿ ಕಡ್ಡಾಯವಾಗಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ವೇಗದೂತ, ತಡೆ ರಹಿತ ಮತ್ತು ಸಾಮಾನ್ಯ ಬಸ್ಸುಗಳಿಗೆ ನಿಲುಗಡೆಗೆ ಅಧಿಕೃತ ಆದೇಶ ಮಾಡಲಾಗಿತ್ತು. ಸಾರಿಗೆ ಸಿಬ್ಬಂದಿ ಮಾತ್ರ ಈ ಆದೇಶಕ್ಕೆ ಕವಡೆ ಕಿಮ್ಮತ್ತು ಕೊಡದ ಕಾರಣ ಸುಮಾರು ವರ್ಷಗಳಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ನಡುವೆ ಸಂಘರ್ಷಗಳು ಜರುಗುತ್ತಲೇ ಇದ್ದು, ಇದಕ್ಕೆ ಇತಿಶ್ರೀ ಹಾಡಬೇಕು. ಹಿರಿಯ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಹತ್ತಾರು ಬಾರಿ ಮನವಿಗಳನ್ನು ಕೊಟ್ಟಿದ್ದು, ಗಮನಾರ್ಹವಾಗಿದೆ. ಸೂಕ್ತ ಕ್ರಮ ಜರುಗಿಸದಿದ್ದರೆ ಬಸ್ ತಡೆದು ಪ್ರತಿಭಟಿಸುತ್ತೇವೆ ಎಂದು ಮಾಜಿ ಮೇಯರ್ ಎನ್ ಬಿ ನಿರ್ವಾಣಿ ಈ ಸಂದರ್ಭದಲ್ಲಿ ಎಚ್ಚರಿಸಿದರು.



ಮನವಿ ಸ್ವೀಕರಿಸಿದ ಅಧೀಕ್ಷಕಿ ವಿಜಯಲಕ್ಶ್ಮಿ ಅವರು, ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವದು ಎಂದರು.



ಆನಂದ ಕರಲಿಂಗನ್ನವರ, ಸಿ.ಎಸ್. ಬಿಡ್ನಾಳ, ಸುರೇಶ ಉರಬಿನಹಟ್ಟಿ, ಮಂಜುನಾಥ ಪಾಟೀಲ, ಎನ್. ಬಿ.ಹಣ್ಣಿಕೇರಿ, ಶಿವಾನಂದ ಮಠಪತಿ, ಮಹಾದೇವ ಕೆಂಪಿಗೌಡ್ರ, ಡಿ.ಕೆ. ಭೂತಿ, ಈರಣ್ಣ ಅಂಗಡಿ, ಶಂಕರಗೌಡ ಪಾಟೀಲ, ವಿ.ಎ. ಮೇಸ್ತ್ರಿ, ಅಡಿವೆಪ್ಪ ವಠಾರ, ಶಿವಾನಂದ ಗಡಾದ, ಈರಗೌಡ ಪಾಟೀಲ, ಬಸವರಾಜ ಮಾದಗೌಡ ಮುಂತಾದವರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು