LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಅಮಾನುಷ ಹಲ್ಲೆ 

ಸಾಂಗಲಿ: ಮಕ್ಕಳ ಕಳ್ಳರೆಂದು ನಾಲ್ವರು ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ ಘಟನೆ ನಡೆದಿದೆ.



https://twitter.com/imvivekgupta/status/1569875625971949569?t=FGokvZ8O0nQjAhUdrXFx6w&s=19



ವಿಡಿಯೋದಲ್ಲಿ, ಸಾಧುಗಳ ಮೇಲೆ ಜನರ ಗುಂಪೊಂದು ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸತ್ಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಸಾಂಗ್ಲಿ ಜಿಲ್ಲಾ ಪೊಲೀಸ ವರಿಷ್ಠ ದೀಕ್ಷಿತ ಗೆಡಮ್ ತಿಳಿಸಿದ್ದಾರೆ.



https://twitter.com/imvivekgupta/status/1569877432991358977?t=XcFFuqNYsNIKA53BUa5mfQ&s=19



ಉತ್ತರ ಪ್ರದೇಶದ ನಾಲ್ವರು ಸಾಧುಗಳು ಬಿಜಾಪುರದಿಂದ ಪಂಢರಪುರಕ್ಕೆ ತೆರಳುತ್ತಿದ್ದಾಗ ಬಾಲಕನಿಗೆ ದಾರಿ ಕೇಳಿದ್ದಾರೆ. ಇದು ಮಕ್ಕಳನ್ನು ಅಪಹರಿಸುವ ತಂಡದಿಂದ ಬಂದಿರಬಹುದು ಎಂದು ಸ್ಥಳೀಯರು ಶಂಕಿಸಿ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಇನ್ನು ಈ ಘಟನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ ಕದಮ್ ಖಂಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST