LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತೀವ್ರ ವಿರೋಧ ಕಾರಣ ‘ದಹಿ’ ಹಿಂದಿ ಪದ ಕೈಬಿಟ್ಟ ಎಫ್ಎಸ್ಎಸ್ಎಐ

ಹೊಸದಿಲ್ಲಿ: ಮೊಸರಿನ ಪೊಟ್ಟಣಗಳ ಮೇಲೆ ‘ದಹಿ’ ಎಂಬ ಹಿಂದಿ ಪದ ಕಡ್ಡಾಯವಾಗಿ ಉಲ್ಲೇಖಿಸಲೇಬೇಕೆಂದು ನೀಡಿದ್ದ ಆದೇಶವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ತೀವ್ರ ವಿರೋಧದ ಹಿನ್ನೆಲೆಯಲ್ಲಿ ಗುರುವಾರ ಪರಿಷ್ಕರಿಸಿದೆ. ಪ್ಯಾಕೆಟ್‌ಗಳ ಮುದ್ರಿತ ಲೇಬಲ್‌ಗಳಲ್ಲಿ ಇಂಗ್ಲಿಷ್‌ ಜತೆಗೆ, ಪ್ರಾದೇಶಿಕ ಭಾಷೆ ಹೆಸರು ಅಂದರೆ ಮೊಸರು ಉಲ್ಲೇಖಿಸಬಹುದು ಎಂದು ಹೇಳಿದೆ.



ರಾಜ್ಯಗಳ ಹಾಲು ಒಕ್ಕೂಟಗಳಿಗೆ ಎಫ್‌ಎಸ್‌ಎಸ್‌ಎಐ ಇತ್ತೀಚೆಗೆ ನೀಡಿದ್ದ ಸೂಚನೆ ತೀವ್ರ ವಿರೋಧಕ್ಕೆ ಗುರಿಯಾಗಿತ್ತು. ಕರ್ನಾಟಕದಲ್ಲಿ ಕನ್ನಡ ಪರ ಹೋರಾಟಗಾರರು ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರೂ ಟ್ವೀಟ್‌ ಮಾಡಿ ಕಿಡಿ ಕಾರಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿಂದಲೂ ಅಸಮಾಧಾನ ವ್ಯಕ್ತವಾಗಿತ್ತು. ಎಫ್‌ಎಸ್‌ಎಸ್‌ಎಐನ ಈ ಆದೇಶವನ್ನು ಪಾಲಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತ್ತು.



ಈ ಹಿನ್ನೆಲೆಯಲ್ಲಿ ಆದೇಶ ಪರಿಷ್ಕರಣೆಗೊಂಡಿದೆ. ಲೇಬಲ್‌ಗಳ ಮೇಲೆ ‘Curd’ ಎಂದು ಬಳಸಿ, ಆವರಣಗಳಲ್ಲಿ ಯಾವುದೇ ಇತರ ಪ್ರಚಲಿತ ಪ್ರಾದೇಶಿಕ ಹೆಸರನ್ನು ಉಲ್ಲೇಖಿಸಲು ಅನುಮತಿ ನೀಡಲಾಗಿದೆ. ಕರ್ಡ ಇಂಗ್ಲೀಷ ಪದ ಕೈಬಿಟ್ಟು 'ದಹಿ' ಎಂಬ ಹಿಂದಿ ಪದವನ್ನು ಕಡ್ಡಾಯವಾಗಿ ಉಲ್ಲೇಖಿಸಬೇಕಾಗಿ ಎಫ್‌ಎಸ್‌ಎಸ್‌ಎಐ ಇತ್ತೀಚೆಗೆ ಆದೇಶ ಹೊರಡಿಸಿತ್ತು.



‘ಆವಿನ್’ ಎಂಬ ಬ್ರಾಂಡ್‌ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಎಫ್‌ಎಸ್‌ಎಸ್‌ಎಐನ ನಿರ್ದೇಶನದಂತೆ ತನ್ನ ಮುದ್ರಿತ ಸ್ಯಾಚೆಟ್‌ಗಳಲ್ಲಿ 'ದಹಿ' ಎಂಬ ಹಿಂದಿ ಪದವನ್ನು ಬಳಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ತಮಿಳಿನಲ್ಲಿ ಮಾತ್ರ ಉತ್ಪನ್ನದ ಹೆಸರು (ತೈರ್‌ ಎಂದು) ಉಲ್ಲೇಖಿಸುವುದಾಗಿ ಹೇಳಿತ್ತು.



ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಎಫ್‌ಎಸ್‌ಎಸ್‌ಎಐನ ಈ ಕ್ರಮವನ್ನು ಹಿಂದಿ ಹೇರಿಕೆ ಪ್ರಯತ್ನ ಎಂದು ಖಂಡಿಸಿದ್ದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ