LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಜ್ಜಿಯ ಕೊಲೆ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧನ!

ಶಿವಮೊಗ್ಗ, ಜುಲೈ 2: ಗಾಂಜಾ ಅಮಲಿನಲ್ಲಿ ತನ್ನ ಅಜ್ಜಿಯನ್ನೇ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಯುವಕನನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಪರಿಣಾಮ, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ಗುರುವಾರ ನಡೆದಿದೆ.

ಬಂಧಿತನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಗಾಂಜಾ ಸೇವನೆ ಹಾಗೂ ಮಾರಾಟದಲ್ಲಿ ತೊಡಗಿದ್ದ ಕಿಶೋರ್ ವಿರುದ್ಧ ದೂರು ನೀಡಲು ಅಜ್ಜಿ ಸುಶೀಲಮ್ಮ ಮುಂದಾಗಿದ್ದರು. ಇದರಿಂದ ಆಕ್ರೋಶಗೊಂಡ ಕಿಶೋರ್, ಅಜ್ಜಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಲು ಮುಂದಾದಾಗ, ಆತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಮಾತು ಕೇಳದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡರು.

ಘಟನೆಯಲ್ಲಿ ಗಾಯಗೊಂಡಿರುವ ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ನಗರ ಹೊರವಲಯದ ವಾಜಪೇಯಿ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ