LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳನ್ನು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯಶಿಕ್ಷಕ ಅಮಾನತು

ಬೆಳ್ತಂಗಡಿ: ತಾಲ್ಲೂಕಿನ ಬಳಂಜ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್‌ ಲಾರಿಯಲ್ಲಿ ಹತ್ತಿಸಿಕೊಂಡು ನರ್ಸರಿಗೆ ಅಧ್ಯಯನಕ್ಕೆ ಕರೆದೊಯ್ದ ಬಗ್ಗೆ ಅದೇ ಗ್ರಾಮದ ಧರಣೇಂದ್ರ ಅವರು ದೂರು ನೀಡಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಬಳಂಜದ ಪ್ರಭಾರ ಮುಖ್ಯಶಿಕ್ಷಕ ಕಿರಣ್‌ ಅವರು ವಿದ್ಯಾರ್ಥಿಗಳನ್ನು ಟಿಪ್ಪರ್‌ ಲಾರಿಯಲ್ಲಿ ಹತ್ತಿಸಿಕೊಂಡು ಅಧ್ಯಯನಕ್ಕೆ ಕರೆದೊಯ್ದಿದ್ದರು. ಅವರನ್ನು ಅಮಾನತು ಮಾಡಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಎಚ್‌.ಎಸ್.ಶಶಿಧರ್ ತಿಳಿಸಿದ್ದಾರೆ.



ಬಳಂಜ ಶಾಲೆಯಲ್ಲಿ ಈಚೆಗೆ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗಿತ್ತು. ಇದಕ್ಕಾಗಿ ಕಿರಣ್‌ ಅವರ ಪ್ರಯತ್ನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಅವರು ವಿದ್ಯಾರ್ಥಿಗಳನ್ನು ಜೇನ್ನೊಣಗಳ ಅಧ‌ಯನಕ್ಕಾಗಿ ನಾಲ್ಕೂರಿನ ಅನಿಲ್ ಫಾರ್ಮ್‌ ನರ್ಸರಿಗೆ ಮಂಗಳವಾರ ಕರೆದೊಯ್ದಿದ್ದರು. ಮಕ್ಕಳು ಟಿಪ್ಪರ್‌ ಲಾರಿಯಲ್ಲಿ ಪ್ರಯಾಣಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಮಕ್ಕಳ ಸುರಕ್ಷತೆಗೆ ಅಧ್ಯಾಪಕರು ಕ್ರಮ ವಹಿಸದ ಬಗ್ಗೆ ಟೀಕೆ ವ್ಯಕ್ತವಾಗಿತ್ತು.



ಮಕ್ಕಳನ್ನು ಲಾರಿಯಲ್ಲಿ ಹತ್ತಿಸಿಕೊಂಡು ಕರೆದೊಯ್ದ ಶಾಲೆಯವರ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ