LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವೀರಯೋಧ ಕ್ಯಾಪ್ಟನ್ ರಾಮಪ್ಪ ಕೊಳ್ಳಿ‌ ನಿಧನ

ಸವದತ್ತಿ, 21- 1992 ರ ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆ ಮತ್ತು 1999 ಕಾರ್ಗಿಲ್ ಯುದ್ಧ ಸೇರಿದಂತೆ ದೇಶದ ಅನೇಕ ಸೈನಿಕ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಭಾರತೀಯ ಸೇನೆಯಲ್ಲಿ ಅಮೋಘ 30 ವರ್ಷಗಳ ಸೇವೆ ಸಲ್ಲಿಸಿದ್ದ ವೀರಯೋಧ ಕ್ಯಾಪ್ಟನ್ ರಾಮಪ್ಪ ಕೊಳ್ಳಿ‌ ನಿಧನರಾದರು.



ಇವರು ನಿವೃತ್ತಿ ನಂತರದ ಜೀವನವನ್ನು ಸ್ವಗ್ರಾಮ ಸವದತ್ತಿ ತಾಲೂಕಿನ ಹಿರೇಕುಂಬಿ ಗ್ರಾಮದಲ್ಲಿ ಕಳೆಯುತ್ತಿದ್ದರು. ಇಂದು ಅವರು ಕೊನೆಯುಸಿರೆಳೆದರು.



ರಾಮಪ್ಪ ಬಿ.ಕೊಳ್ಳಿಯವರ ಹುಟ್ಟೂರಾದ ಹಿರೇಕುಂಬಿಯಲ್ಲಿ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪೂರೈಸಿ, ಭಾರತೀಯ ಸೇನೆಗೆ 1992 ಮಾರ್ಚ 28 ರಂದು ಸೇರಿ 30 ವರ್ಷಗಳ ಕಾಲ ಸೇವೆಗೈದು ಕಳೆದ ವರ್ಷ ಮಾರ್ಚ 31 ರಂದು ನಿವೃತ್ತರಾಗಿದ್ದರು.



ಪುಣೆ, ರಾಜಸ್ಥಾನ, ಡೆಹ್ರಾಡೂನ್, ಕಾರ್ಗಿಲ್ ಯುದ್ಧದ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ದ್ರಾಸ್ ವಲಯದಲ್ಲಿ , 2000-2010 ರವರೆಗೆ ಆಪರೇಷನ್ ಪರಾಕ್ರಮ, ಉತ್ತರ ಕಾಶ್ಮೀರದ ಅಮರನಾಥ ಸುರಕ್ಷತಾ ಕಾರ್ಯಾಚರಣೆ, ಸೋನಾಮಾರ್ಗ ಸುರಕ್ಷತೆ ಮತ್ತಿತರ ಪ್ರಮುಖ ಸೇವೆಗಳ ಸಂದರ್ಭದಲ್ಲಿ ವಿವಿಧ ಹುದ್ದೆಗಳಲ್ಲಿ ಅವರು ಸೇವೆಗೈದಿದ್ದಾರೆ‌. ಬೆಳಗಾವಿಯ ಇನ್‌ಫಂಟ್ರಿ ಕಮಾಂಡೋ ಶಾಲೆಯಲ್ಲಿಯೂ ಕ್ಯಾಪ್ಟನ್ ಆಗಿ ಅವರು ಸೇವೆಗೈದಿದ್ದಾರೆ.



ಸುದೀರ್ಘ 30 ವರ್ಷಗಳ ಕಾಲ ದೇಶಸೇವೆಗೈದು, ನಿವೃತ್ತಿ ನಂತರ ಗ್ರಾಮದಲ್ಲಿದ್ದವರನ್ನು ಕಳೆದುಕೊಂಡು ಹಿರೇಕುಂಬಿ ಗ್ರಾಮದ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.



ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಏಪ್ರಿಲ್ 21.04.2023 ಶುಕ್ರವಾರದಂದು ಸಂಜೆ 6 ಘಂಟೆಗೆ ಹಿರೇಕುಂಬಿ ಗ್ರಾಮದಲ್ಲಿ ಜರುಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು