LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪತಿಯ ಚೆಕ್ ಬೌನ್ಸ ಆದರೆ ಪತ್ನಿ ವಿರುದ್ಧ ಕೇಸ್ ಇಲ್ಲ: ಹೈಕೋರ್ಟ

ಬೆಂಗಳೂರು: ಪತಿಯ ಚೆಕ್ ಬೌನ್ಸ ಆದರೆ ಪತ್ನಿ ವಿರುದ್ಧ ಕೇಸ್ ದಾಖಲಿಸುವಂತಿಲ್ಲ ಎಂದು ಹೈಕೋರ್ಟ ಆದೇಶಿಸಿದೆ. ಭದ್ರತಾ ಖಾತರಿಗೆ ನೀಡಲಾಗಿದ್ದ ಚೆಕ್ ಬೌನ್ಸ ಆದ ಪ್ರಕರಣದಲ್ಲಿ ಹೈಕೋರ್ಟ ಈ ಆದೇಶ ನೀಡಿದೆ.



ಚೆಕ್ ನೀಡಿದಾತನ ಪತ್ನಿ ವಿರುದ್ದ ಕೇಸು ದಾಖಲಿಸಲು ಅವಕಾಶವಿಲ್ಲವೆಂದು ಹೈಕೋರ್ಟ ಸ್ಪಷ್ಟಪಡಿಸಿದೆ. ಮಹಿಳೆ ವಿರುದ್ಧ ದಾಖಲಾಗಿದ್ದ ಚೆಕ್ ಬೌನ್ಸ ದೂರನ್ನು ರದ್ದುಪಡಿಸಲಾಗಿದೆ.



ಬೆಂಗಳೂರಿನ ವೀಣಾಶ್ರೀ, ಅವರ ಪತಿ ಮತ್ತು ಅತ್ತೆ ಅವರು ಸಾಲವಾಗಿ ಶಂಕರ ಎಂಬುವವರಿಂದ ಹಣ ಪಡೆದುಕೊಂಡಿದ್ದರು. ಸಾಲ ಮರುಪಾವತಿಗೆ ಭದ್ರತಾ ಖಾತರಿಯಾಗಿ ವೀಣಾಶ್ರೀಯ ಪತಿ ಸಹಿ ಇರುವ ಚೆಕ್ ನೀಡಲಾಗಿತ್ತು.



ಆ ಚೆಕ್ ಬೌನ್ಸ ಆದ ಕಾರಣ 2017 ರಲ್ಲಿ ಶಂಕರ 22ನೇ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಎರಡನೇ ಆರೋಪಿ ವೀಣಾಶ್ರೀ ತಮ್ಮ ವಿರುದ್ಧ ದಾಖಲಿಸಿರುವ ದೂರು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಬೌನ್ಸ್ ಆಗಿರುವ ಚೆಕ್ ಗೆ ತಾವು ಸಹಿ ಹಾಕಿಲ್ಲ. ಪತಿ ಸಹಿ ಹಾಕಿದ್ದಾರೆ. ತಮ್ಮನ್ನು ಅಭಿಯೋಜನೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.



ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ, ಪ್ರಕರಣದಲ್ಲಿ ಚೆಕ್ ಗೆ ಅರ್ಜಿದಾರರು ಸಹಿ ಹಾಕಿಲ್ಲ. ಚೆಕ್ ಗೆ ಸಂಬಂಧಿಸಿದ ಖಾತೆ ಜಂಟಿ ಖಾತೆಯೂ ಅಲ್ಲ. ಇಂತಹ ಸಂದರ್ಭದಲ್ಲಿ ಪತಿ ನೀಡಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಅರ್ಜಿದಾರರಾದ ವೀಣಾಶ್ರೀಯನ್ನು ಆರೋಪಿಯಾಗಿ ಮಾಡಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಪತಿಯ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ ಎಂದು ತಿಳಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ