LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಿವೃತ್ತ ನೌಕರರ ವಿರುದ್ಧ ತನಿಖೆಗೆ ಅವಕಾಶವಿಲ್ಲ; ಹೈಕೋರ್ಟ ಮಹತ್ವದ ಆದೇಶ

ಬೆಂಗಳೂರು, ೩೦- ನಾಲ್ಕು ವರ್ಷಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನೌಕರರ ವಿರುದ್ಧ ತನಿಖೆ ನಡೆಸಲು ಅವಕಾಶವಿಲ್ಲವೆಂದು ಹೈಕೋರ್ಟ ಮಹತ್ವದ ಆದೇಶ ನೀಡಿದೆ.



ಕರ್ನಾಟಕ ನಾಗರೀಕ ಸೇವೆಗಳ ಅಧಿನಿಯಮದ ನಿಯಮ 214ರ 2(ಬಿ) (ಜಿಜಿ) ಪ್ರಕಾರ ಇದಕ್ಕೆ ಅವಕಾಶವಿಲ್ಲವೆಂಬುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.



ಪ್ರಕರಣದ ವಿವರ: ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ ಕುಮಾರ ಹಾಗೂ ಟಿ. ಮಲ್ಲಣ್ಣ ವಿರುದ್ಧ 2006ರಲ್ಲಿ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022ರ ಜೂನ್ 21ರಂದು ಮೆಮೋ ಜಾರಿಗೊಳಿಸಲಾಗಿತ್ತು.



ಆದರೆ ಅನಿಲ ಕುಮಾರ 2018ರ ಜೂನ್ 30ರಂದು ನಿವೃತ್ತಿಯಾಗಿದ್ದರೆ, ಮಲ್ಲಣ್ಣ 2020 ರ ಆಗಸ್ಟ್ 30 ರಂದು ನಿವೃತ್ತರಾಗಿದ್ದರು. ಹೀಗಾಗಿ 2006 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈಗ ಮೆಮೋ ನೀಡಲಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಅವಕಾಶವಿಲ್ಲವೆಂದು ತೀರ್ಪು ಪ್ರಕಟಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST