LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೇವಾಲಯಗಳಲ್ಲಿ ಮೊಬೈಲ್ ನಿಷೇಧಕ್ಕೆ ಹೈಕೋರ್ಟ ಆದೇಶ

ಚೆನ್ನೈ: ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ ಶುಕ್ರವಾರ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ.



ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ನಿಷೇಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಎಂ. ಸೀತಾರಾಮನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ ಈ ಆದೇಶ ನೀಡಿದೆ.



ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು. ಇದು ಆಗಮಗಳಿಗೆ ವಿರುದ್ಧವಾಗಿರುವುದರಿಂದ ತಿರುಚೆಂದೂರು ದೇವಸ್ಥಾನದೊಳಗೆ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ ಅವರುಗಳು, ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಲು ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು. ಫೋನ್ ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ ಎಂದಿದ್ದಾರೆ.



ಮೊಬೈಲ್ ಫೋನ್‌ಗಳ ಮೇಲಿನ ನಿಷೇಧವನ್ನು ದೇಶಾದ್ಯಂತ ಹಲವು ದೇವಾಲಯಗಳಲ್ಲಿ ಈಗಾಗಲೇ ನಿಷೇಧಿಸಲಾಗಿದೆ. ಗುರುವಾಯೂರ್‌ನಲ್ಲಿರುವ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ ಇದರಲ್ಲಿ ಸೇರಿವೆ. ಈ ನಿಯಮವನ್ನು ಆ ದೇವಾಲಯಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು