LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೆದಾಂತ ಆಸ್ಪತ್ರೆಗೆ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ

ಹೊಸದಿಲ್ಲಿ, ಜುಲೈ 21: ಹಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚುಕ ಅವರನ್ನು ಸಫ್ದರಜಂಗ್ ಆಸ್ಪತ್ರೆಯಿಂದ ಅವರು ಬಯಸಿರುವ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿತು.

ವಾಂಗ್ಚುಕ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೊ, ಸಫ್ದರಜಂಗ್ ಆಸ್ಪತ್ರೆಯಿಂದ ತಮ್ಮ ಪತಿಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ತಿರಸ್ಕರಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ವಾಂಗ್ಚುಕ ಪರ ಹಿರಿಯ ವಕೀಲ ಅಖಿಲ್ ಸಿಬಲ್ ವಾದ ಮಂಡಿಸಿ, ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿರುವ ಹಾಗೂ ಸ್ವತಃ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ ವ್ಯಕ್ತಿಗೆ ತಾನು ಎಲ್ಲಿ ಚಿಕಿತ್ಸೆ ಪಡೆಯಬೇಕು ಎಂಬುದನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಬಂಧನದಲ್ಲಿಲ್ಲದ ವ್ಯಕ್ತಿಯ ವೈದ್ಯಕೀಯ ಸ್ವಾಯತ್ತತೆಯನ್ನು ಗೌರವಿಸಬೇಕು. ಚಿಕಿತ್ಸೆಯ ಪ್ರತಿಯೊಂದು ಹಂತವೂ ಪಾರದರ್ಶಕವಾಗಿರಬೇಕು ಎಂದು ಅವರು ವಾದಿಸಿದರು.

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ವ್ಯಕ್ತಿಯ ವೈಯಕ್ತಿಕ ನಿರ್ಧಾರದ ಹಕ್ಕು ಮಹತ್ವದ್ದಾದರೂ, ಜೀವ ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು. ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿದೆ ಎಂದು ಅವರು ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿದೆಹಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಾಯಗೊಂಡ ಯುವತಿ ವೆಂಟಿಲೇಟರ್‌ನಲ್ಲಿ; ಸ್ಥಿತಿ ಗಂಭೀರ