LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

400 ರೂ. ಲಂಚ ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ

ಬೆಂಗಳೂರು, ೨೬- ಲಂಚ ಪಡೆದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಗುಮಾಸ್ತನನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಿದ್ದ ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ರದ್ದುಪಡಿಸಲು ಕೋರಿದ್ದ ಗುಮಾಸ್ತನ ಅರ್ಜಿಯನ್ನು ವಜಾಗೊಳಿಸಲಾಗಿದೆ.



ಪ್ರಕರಣದ ವಿವರ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಸವರಾಜ ಸಂಗಪ್ಪ ಗಾಣಿಗೇರಾ ಎಂಬವರು ತಮ್ಮ ನಿವೇಶನದಲ್ಲಿ ಶೆಡ್ ನಿರ್ಮಿಸುವ ಸಲುವಾಗಿ ಅನುಮತಿ ಕೋರಿದ್ದು, ಈ ವೇಳೆ ಕುಷ್ಟಗಿ ಪುರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ನರಸಿಂಹಲು ಅವರಿಂದ 400 ರೂಪಾಯಿ ಲಂಚ ಪಡೆದಿದ್ದರು.



2008ರ ಅಕ್ಟೋಬರ್ 3ರಂದು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ವಿಚಾರಣೆಯಲ್ಲೂ ಇದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿತ್ತು.



ಇದನ್ನು ಪ್ರಶ್ನಿಸಿ ನರಸಿಂಹಲು ಹೈಕೋರ್ಟ ಮೆಟ್ಟಿಲೇರಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದ್ದು ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಎತ್ತಿ ಹಿಡಿದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ