LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿಜಾಬ್ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ 

ನವದೆಹಲಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ಸುಪ್ರೀಮ ಕೋರ್ಟ​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.



ಹಿರಿಯ ವಕೀಲ ದೇವದತ್​ ಕಾಮತ​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.



ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ ಹಿಜಾಬ್​ ಧರಿಸುವುದು ಹಕ್ಕು ಎಂದು ವಾದ ಮಂಡಿಸಿದಾಗ ಕೋರ್ಟ​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಮ ಕೋರ್ಟ ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST