LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿ–ದಾದರ್ ರೈಲು ಖಾನಾಪುರದಲ್ಲೂ ನಿಲುಗಡೆ

ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ SSS ಹುಬ್ಬಳ್ಳಿ–ದಾದರ–SSS ಹುಬ್ಬಳ್ಳಿ ಎಕ್ಸ್‌ಪ್ರೆಸ್ ಖಾನಾಪುರದಲ್ಲಿ ಒಂದು ನಿಮಿಷ ನಿಲುಗಡೆಯಾಗಲಿದೆ.



ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಖಾನಾಪುರ (KNP) ರೈಲು ನಿಲ್ದಾಣದಲ್ಲಿ ದಿನಾಂಕ 15.09.2025 ರಿಂದ ರೈಲು ಸಂಖ್ಯೆ 17317/17318 SSS ಹುಬ್ಬಳ್ಳಿ–ದಾದರ–SSS ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದು ನಿಮಿಷ ನಿಲುಗಡೆ ನೀಡಿದೆ. ರೈಲು ಸಂಖ್ಯೆ 17317 (SSS ಹುಬ್ಬಳ್ಳಿ–ದಾದರ) 17:59 ಕ್ಕೆ ಖಾನಾಪುರ ತಲುಪಿ 18:00 ಕ್ಕೆ ನಿರ್ಗಮಿಸಲಿದೆ. ಅದೇ ರೀತಿ ದಿನಾಂಕ 16.09.2025 ರಂದು ರೈಲು ಸಂಖ್ಯೆ 17318 (ದಾದರ–SSS ಹುಬ್ಬಳ್ಳಿ) 08:40 ಕ್ಕೆ ಖಾನಾಪುರ ತಲುಪಿ 08:41 ಕ್ಕೆ ನಿರ್ಗಮಿಸಲಿದೆ. ಪ್ರಯಾಣಿಕರು ಈ ನಿಲುಗಡೆಯ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕೋರಲಾಗಿದೆ.



ಸೋಮವಾರ ಕಾರ್ಯಕ್ರಮ :

ಸೆಪ್ಟೆಂಬರ್ 15ರಂದು ಖಾನಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಲಿದ್ದಾರೆ. ಖಾನಾಪುರ ತಾಲೂಕಿನಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೆ ತರಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶೇಷ ಪ್ರಯತ್ನ ಮಾಡಿದ್ದಾರೆ. ಖಾನಾಪುರ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಹುಬ್ಬಳ್ಳಿ- ದಾದರ್ ರೈಲು ನಿಲುಗಡೆಗೆ ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವರಿಕೆ ಮಾಡಿ ಈ ಭಾಗದ ಜನತೆಗೆ ಅನುಕೂಲತೆ ಮಾಡಿಕೊಟ್ಟಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು