LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ನೊಂದು ಪತಿಯ ಆತ್ಮಹತ್ಯೆ!

ದಾಂಡೇಲಿ, ಮೇ 2 : ಪತ್ನಿಯ ಅನೈತಿಕ ಸಂಬಂಧ ಹಾಗೂ ನಿರಂತರ ಮಾನಸಿಕ ಕಿರುಕುಳದಿಂದಾಗಿ ತೀವ್ರ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಶರಣಾದವರು ರಾಘವೇಂದ್ರ ವಾಡಕರ ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲೇ ಡೆತ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ರಾಘವೇಂದ್ರ ಕಳೆದ ಮೂರು ವರ್ಷಗಳಿಂದ ಮಲೇಷಿಯಾದಲ್ಲಿ ಉದ್ಯೋಗದಲ್ಲಿದ್ದರು. ಒಂದು ವಾರದ ಹಿಂದೆ ದಾಂಡೇಲಿಗೆ ಮರಳಿದ್ದ ಅವರು, ಕುಟುಂಬ ಜೀವನವನ್ನು ಪುನರಾರಂಭಿಸುವ ನಿರೀಕ್ಷೆಯಲ್ಲಿ ಇದ್ದರು ಎನ್ನಲಾಗಿದೆ. ಆದರೆ ಮನೆಗೆ ಮರಳುತ್ತಿದ್ದಂತೆಯೇ ಪತ್ನಿ ಮೇಘಾ ಇಬ್ಬರು ಮಕ್ಕಳೊಂದಿಗೆ ಧಾರವಾಡದಲ್ಲಿರುವ ತನ್ನ ತವರು ಮನೆಗೆ ತೆರಳಿದ್ದಳು.

ಪತ್ನಿಯನ್ನು ಮನೆಗೆ ಕರೆಸಿಕೊಳ್ಳಲು ರಾಘವೇಂದ್ರ ಹಲವಾರು ಬಾರಿ ಮನವಿ ಮಾಡಿದರೂ, ಮೇಘಾ ಬರಲು ನಿರಾಕರಿಸಿದ್ದಳು. ತನ್ನೊಂದಿಗೆ ಸಂಸಾರ ನಡೆಸಲು ಆಸಕ್ತಿ ಇಲ್ಲ ಎಂದು ಹೇಳಿದ್ದಲ್ಲದೆ, ಅವಮಾನಕಾರಿ ಮಾತುಗಳನ್ನೂ ಆಡಿದ್ದಳು ಎಂದು ತಿಳಿದುಬಂದಿದೆ.

ಇದೇ ವೇಳೆ ಮೇಘಾ ತನ್ನ ಅನೈತಿಕ ಸಂಬಂಧವನ್ನು ಗಂಡನ ಎದುರೇ ಬಹಿರಂಗಪಡಿಸಿದ್ದಲ್ಲದೆ, ಬೇರೊಬ್ಬ ವ್ಯಕ್ತಿಯೊಂದಿಗೆ ಇರುವ ತನ್ನ ಫೋಟೋಗಳನ್ನು ಮೊಬೈಲನಲ್ಲಿ ಹಂಚಿಕೊಂಡಿದ್ದಳು. ಇದರಿಂದ ತೀವ್ರ ಆಘಾತಗೊಂಡ ರಾಘವೇಂದ್ರ ಮಾನಸಿಕವಾಗಿ ಕುಗ್ಗಿದ್ದರು.

ಮಾನಸಿಕವಾಗಿ ನೊಂದ ರಾಘವೇಂದ್ರ ಒಂದು ಹಂತದಲ್ಲಿ ತಮ್ಮ ಕೈಯನ್ನು ತಾವೇ ಕೊಯ್ದುಕೊಂಡು ಅದರ ಚಿತ್ರವನ್ನು ಪತ್ನಿಗೆ ಕಳುಹಿಸಿದ್ದರೂ, ಅದಕ್ಕೂ ಸ್ಪಂದನೆ ದೊರಕಲಿಲ್ಲ. ಬದಲಿಗೆ ನೀನು ಸತ್ತರೂ ನನಗೆ ಯಾವುದೇ ತೊಂದರೆಯಿಲ್ಲ ಎಂದು ಮೇಘಾ ಪ್ರತಿಕ್ರಿಯಿಸಿದ್ದಳು ಎಂದು ಮೂಲಗಳು ತಿಳಿಸಿವೆ.

ಈ ಎಲ್ಲ ಬೆಳವಣಿಗೆಗಳಿಂದ ಸಂಪೂರ್ಣವಾಗಿ ನೊಂದ ರಾಘವೇಂದ್ರ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಘಟನೆ ಕುಟುಂಬ ಸದಸ್ಯರು ಹಾಗೂ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದೆ. ಪ್ರಕರಣ ಸಂಬಂಧ ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನದಿ ದಂಡೆಯಲ್ಲಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ: ವ್ಯಕ್ತಿಗೆ ಗಂಭೀರ ಗಾಯದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ನೊಂದು ಪತಿಯ ಆತ್ಮಹತ್ಯೆ!ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಘೋಷಣೆಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆಉದ್ಯೋಗ ಸಿಗದೆ ಖಿನ್ನತೆ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಕಮರ್ಷಿಯಲ್ ಗ್ಯಾಸ್ ದರ ಶೇ.50ರಿಂದ ಶೇ.60ರಷ್ಟು ಹೆಚ್ಚಳ!ಬೋಟ್ ದುರಂತದಲ್ಲಿ ಮನಕಲಕುವ ದೃಶ್ಯ: ಮಗುವನ್ನು ಎದೆಗವಚಿಕೊಂಡ ತಾಯಿಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರಮತ ಎಣಿಕೆಯಲ್ಲಿ ಕೇಂದ್ರ ಸಿಬ್ಬಂದಿ ನಿಯೋಜನೆಗೆ ಟಿಎಂಸಿ ವಿರೋಧ: ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟವಾಣಿಜ್ಯ ಎಲ್‌ಪಿಜಿ ಸಿಲಿಂಡರ 993ರೂ.ಹೆಚ್ಚಳ!