LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಖಾಸಗಿ ವಾಹನದಲ್ಲಿ ಇವಿಎಂ ಮಷಿನ್ ಅಕ್ರಮ ಸಾಗಾಟ

ಶಿಮ್ಲಾ, ೧೪- ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರ ಕ್ಷೇತ್ರದಲ್ಲಿ ಖಾಸಗಿ ವಾಹನದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆ ದತ್ತನಗರ ಪಂಚಾಯಿತಿ ಮತಗಟ್ಟೆಯ ಆರು ಜನ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ.



ರಾಂಪುರದ ಎಸ್‌ಡಿಎಂ ಮತ್ತು ಡಿಎಸ್‌ಪಿ ಅವರು, ಪಕ್ಷದ 6 ಸದಸ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮತದಾನ ಮುಗಿದ ಬಳಿಕ ಕಾಂಗ್ರೆಸ್ ಸದಸ್ಯೆ ಅಲ್ಕಾ ಲಂಬಾ ಟ್ವೀಟ್ ಮಾಡಿದಾಗ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.



ರಾಂಪುರದಲ್ಲಿ ಮತ್ತೊಮ್ಮೆ ಖಾಸಗಿ ವಾಹನದಲ್ಲಿ ಇವಿಎಂ ಯಂತ್ರಗಳು ಪತ್ತೆಯಾಗಿವೆ. ಜನರು ಇವಿಎಂ ಇದ್ದ ಖಾಸಗಿ ವಾಹನವನ್ನು ಸುತ್ತುವರೆದು ಪೊಲೀಸರ ಬರುವಿಕೆಗೆ ಕಾಯುತ್ತಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಆಡಳಿತಕ್ಕೆ ದೊಡ್ಡ ಸವಾಲು ಎಂದು ಅಲ್ಕಾ ಲಾಂಬಾ ಟ್ವೀಟ್ ಮಾಡಿದ್ದಾರೆ.



ರಾಂಪುರ, ದತ್ತನಗರಕ್ಕೆ ಹೊಂದಿಕೊಂಡಿರುವ ಪಂಚಾಯಿತಿಯಲ್ಲಿ ಮತದಾನ ಮುಗಿದ ಬಳಿಕ ಖಾಸಗಿ ವಾಹನದ ಮೂಲಕ ಇವಿಎಂ ಯಂತ್ರಗಳನ್ನು ರಾಂಪುರ ಸ್ಟ್ರಾಂಗ್ ರೂಂಗೆ ತರಲಾಗುತ್ತಿತ್ತು. ಅಷ್ಟರಲ್ಲಿ ಈ ವಿಷಯ ತಿಳಿದ ರಾಂಪುರ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ರಾಷ್ಟ್ರೀಯ ಹೆದ್ದಾರಿ-5ರಲ್ಲಿ ವಾಹನ ನಿಲ್ಲಿಸಿದ್ದರು.



ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ವಾಹನ ತಡೆದರು. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದಾಗಿ ಭರವಸೆ ನೀಡಿದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ