LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿ, ದಾವಣಗೆರೆಯಲ್ಲಿಯೂ ಮತದಾರ ಪಟ್ಟಿ ಅಕ್ರಮ ಬೆಳಕಿಗೆ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆ ಮುಖ್ಯಸ್ಥರಾದ ರವಿಕುಮಾರ, ಕೆಂಪೇಗೌಡ, ರೇಣುಕಾಪ್ರಸಾದ, ಹೆಚ್.ಆರ್.ಧರ್ಮೇಶ ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳು. ಅಕ್ರಮದ ಬಗ್ಗೆ ತನಿಖೆ ಚುರುಕುಗೊಳಿಸುತ್ತಿದ್ದಂತೆ ಹುಬ್ಬಳ್ಳಿ, ದಾವಣಗೆರೆ, ಕನಕಗಿರಿಯಲ್ಲಿಯೂ ವೋಟರ್ ಐಡಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.



ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆ ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 6 ತಿಂಗಳ ಹಿಂದೆಯೇ ಮತದಾರರ ಮಾಹಿತಿ ಸಂಗ್ರಹಿಸಿ ಸ್ಮಾರ್ಟ ಸಿಟಿ ವಿಭಾಗದ ಹೆಸರಲ್ಲಿ ಅಕ್ರಮ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.



ಕನಕಗಿರಿ ಕ್ಷೇತ್ರದಲ್ಲಿ ಸುಮಾರು 9 ಸಾವಿರ ಮತದಾರರ ಸಂಖ್ಯೆ ಕಡಿಮೆಯಾಗಿದ್ದು ಬಿಜೆಪಿ ಸೋಲಿನ ಭೀತಿಯಲ್ಲಿ ಈ ರೀತಿ ಮಾಡುತ್ತಿದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ದೂರಿದ್ದಾರೆ. ಇನ್ನು ದಾವಣಗೆರೆಯಲ್ಲಿ ಮತದಾರರ ಪಟ್ಟಿಯಿಂದ 1718 ಜನರ ಹೆಸರೇ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಫಾರ್ಮ ನಂ.7 ಭರ್ತಿ ಮಾಡದೇ ಮತದಾರರ ಪಟ್ಟಿಯಿಂದಲೇ ಹೆಸರನ್ನು ಕೈಬಿಡಲಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ