LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರ ಸಚಿವರ ಭೇಟಿ ಹಿನ್ನೆಲೆ ಪೊಲೀಸ ಆಯುಕ್ತರನ್ನು ಭೇಟಿಯಾಗಿ ಕರವೇ ಮನವಿ

ಬೆಳಗಾವಿ : ಶನಿವಾರ ಬೆಳಗಾವಿಯ ಮರಾಠಾ ಮಂದಿರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಆಯೋಜಿಸಿರುವ ಮಹಾರಾಷ್ಟ್ರದ ಇಬ್ಬರು ಸಚಿವರ ಸಭೆಗೆ ರಾಜ್ಯದ ಹಿತದೃಷ್ಟಿಯಿಂದ ಅವಕಾಶ ನೀಡಬಾರದು, ಇದಕ್ಕೆ ವಿರೋಧವಾಗಿ ನಡೆದುಕೊಂಡದೇ ಆದರೆ ಆಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.



ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಪದಾಧಿಕಾರಿಗಳು ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸಿದ್ದಾರೆ.



ಬಳಿಕ ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಬೆಳಗಾವಿಯಲ್ಲಿ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕರವೇ ಇದನ್ನು ವಿರೋಧಿಸುತ್ತದೆ. ಹೀಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬಾರದು. ಅವರು ಇಲ್ಲಿಗೆ ಬಂದು ಪ್ರಚೋದನಕಾರಿ ಭಾಷಣ ಮಾಡಿ ಭಾಷಾ ಸಾಮಾರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಲಿದ್ದಾರೆ ಎಂದು ಕಿಡಿಕಾರಿದರು.



ಒಂದು ವೇಳೆ ಮಹಾರಾಷ್ಟ್ರ ಸಚಿವರಿಗೆ ಅವಕಾಶ ಕೊಟ್ಟರೆ ಅದನ್ನು ಕರವೇ ಸಹಿಸುವುದಿಲ್ಲ. ಅವರು ಬಂದರೆ ಅವರಿಗೆ ಸರಿಯಾದ ಪಾಠ ಕಲಿಸುತ್ತೇವೆ. ಆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ್ರೆ ಸರ್ಕಾರವೇ ಹೊಣೆ. ಹೀಗಾಗಿ ಅವರಿಗೆ ಕರ್ನಾಟಕ ಗಡಿ ಪ್ರವೇಶ ಮಾಡಲು ಅವಕಾಶ ಮಾಡಿಕೊಡಬಾರದು ಎಂದರು.



ಬೆಳಗಾವಿಯಲ್ಲಿನ ಮಹಾರಾಷ್ಟ್ರವಾದಿಗಳೊಂದಿಗೆ ಸಭೆ ನಡೆಸಲು ಮಹಾರಾಷ್ಟ್ರ ಸರಕಾರ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ದೇಸಾಯಿ ಅವರನ್ನು ಡಿಸೆಂಬರ್ 3ರಂದು ಬೆಳಗಾವಿಗೆ ತೆರಳಲು ಸೂಚಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ