LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಾಂಗ್ಚೂಕ್ ತಂದೆಯ ಉಪವಾಸ ಅಂತ್ಯಗೊಳಿಸಿದ್ದ ಇಂದಿರಾ: ಸೋನಿಯಾ ನೆನಪು

ಹೊಸದಿಲ್ಲಿ, ಜುಲೈ 17: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚೂಕ್ ಅವರಿಗೆ ಬೆಂಬಲ ಸೂಚಿಸುವ ಬಗ್ಗೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಅವರ ಸೂಚನೆಯ ಮೇರೆಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಶುಕ್ರವಾರ ಜಂತರ್ ಮಂತರ್‌ಗೆ ಭೇಟಿ ನೀಡಿ ವಾಂಗ್ಚೂಕ್ ಅವರನ್ನು ಭೇಟಿಯಾಗಿ ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದಾರೆ.

ಗುರುವಾರ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ವಾಂಗ್ಚೂಕ್ ಅವರಿಗೆ ಬೆಂಬಲ ಸೂಚಿಸಬೇಕು ಎಂದು ಸೋನಿಯಾ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ಕೆಲವು ನಾಯಕರು ಈ ಕುರಿತು ಆಸಕ್ತಿ ತೋರಲಿಲ್ಲ ಎನ್ನಲಾಗಿದೆ. ಈ ವೇಳೆ 1984ರಲ್ಲಿ ನಡೆದ ಘಟನೆಯನ್ನು ನೆನಪಿಸಿದ ಸೋನಿಯಾ ಗಾಂಧಿ, ಆಗಿನ ಪ್ರಧಾನಿ ಇಂದಿರಾ ಗಾಂಧಿ ಅನುಸರಿಸಿದ್ದ ನಡೆ ಪಕ್ಷಕ್ಕೆ ಮಾದರಿಯಾಗಬೇಕು ಎಂದು ತಿಳಿಸಿರುವುದಾಗಿ ವರದಿಯಾಗಿದೆ.

1984ರಲ್ಲಿ ಲಡಾಖ್ ಜನರಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಸೋನಂ ವಾಂಗ್ಚೂಕ್ ಅವರ ತಂದೆ ಸೋನಂ ವಾಂಗ್ಯಾಲ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವಿಷಯ ತಿಳಿದಿದ್ದ ಇಂದಿರಾ ಗಾಂಧಿ ಸ್ವತಃ ಪ್ರತಿಭಟನಾ ಸ್ಥಳಕ್ಕೆ ತೆರಳಿ ವಾಂಗ್ಯಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಉಪವಾಸವನ್ನು ಕೊನೆಗೊಳಿಸುವಂತೆ ಮನವೊಲಿಸಿದ್ದರು ಎಂದು ಸೋನಿಯಾ ಗಾಂಧಿ ಸಭೆಯಲ್ಲಿ ಸ್ಮರಿಸಿರುವುದಾಗಿ ಮೂಲಗಳು ತಿಳಿಸಿವೆ.

ಇಂದಿರಾ ಗಾಂಧಿ ಅದೇ ವರ್ಷದ ಅಕ್ಟೋಬರ್‌ನಲ್ಲಿ ಹತ್ಯೆಯಾಗಿದ್ದರೂ, ಬಳಿಕ 1989ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಲಡಾಖ್‌ನ ಪ್ರಮುಖ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿತ್ತು.

ತಂದೆಯ ಹಾದಿಯನ್ನೇ ಅನುಸರಿಸಿರುವ ಸೋನಂ ವಾಂಗ್ಚೂಕ್ ರಾಜಕೀಯಕ್ಕಿಂತ ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. 1988ರಲ್ಲಿ ಅವರು ಲಡಾಖ್ ಸ್ಟೂಡೆಂಟ್ಸ್ ಎಜುಕೇಷನಲ್ ಅಂಡ್ ಕಲ್ಚರಲ್ ಮೂವ್ಮೆಂಟ್ (ಸೆಕ್ಮೋಲ್) ಸಂಸ್ಥೆಯನ್ನು ಸ್ಥಾಪಿಸಿ, ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುವ ಕಾರ್ಯ ಆರಂಭಿಸಿದ್ದರು. ಹಿಮಾಲಯ ಪ್ರದೇಶದಲ್ಲಿ ನೀರಿನ ಸಮಸ್ಯೆಗೆ ಪರಿಹಾರವಾಗಿ ‘ಐಸ್ ಸ್ತೂಪ’ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಜಾಗತಿಕ ಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಲಡಾಖ್‌ಗೆ ಸಂವಿಧಾನದ ಆರನೇ ಪರಿಚ್ಛೇದದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ್ದ ವಾಂಗ್ಚೂಕ್, ಆ ಸಂದರ್ಭದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡು ಬಂಧನಕ್ಕೂ ಒಳಗಾಗಿದ್ದರು.

ಪ್ರಸ್ತುತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಗಂಭೀರವಾದರೂ ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕದೇಶೀ ಪಿಸ್ತೂಲ್ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನುತಿಲಾರಿ–ರಕ್ಕಸಕೊಪ್ಪ ಜಲಾಶಯ ಸಂಪರ್ಕಕ್ಕೆ ಆಗ್ರಹಬೆಳಗಾವಿ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನಸಂಬಂಧಿಕರಿಂದ ಇಬ್ಬರು ಸಹೋದರರ ಬರ್ಬರ ಹತ್ಯೆಜನಬೆಂಬಲ ಸಿಕ್ಕರೆ 2028ರಲ್ಲಿ ನನ್ನ ತಂದೆ ಮುಖ್ಯಮಂತ್ರಿ : ಪ್ರಿಯಾಂಕಾ ಜಾರಕಿಹೊಳಿಭಾರತ ನಾಯಕತ್ವದ ಬೇಜವಾಬ್ದಾರಿಯಿಂದ ಬುಲೆಟ್ ರೈಲು ಯೋಜನೆ ವಿಳಂಬ: ಜಪಾನ್ ಮಾಜಿ ಸಚಿವ ಆರೋಪಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟವಾಂಗ್ಚೂಕ್ ತಂದೆಯ ಉಪವಾಸ ಅಂತ್ಯಗೊಳಿಸಿದ್ದ ಇಂದಿರಾ: ಸೋನಿಯಾ ನೆನಪುಆಂಧ್ರದಲ್ಲಿ ಮತ್ತೆ ಕೊರೊನಾ : 20 ದಿನಗಳಲ್ಲಿ ನಾಲ್ವರ ಸಾವು, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ