LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳಿಂದ ದೇಣಿಗೆ ಕಳ್ಳತನದ ವಿನೂತನ ಪ್ರತಿಭಟನೆ

ಹೊಸದಿಲ್ಲಿ, ಜುಲೈ 31: ಸಂಸತ್ತಿನ ಮುಂಗಾರು ಅಧಿವೇಶನದ ನಡುವೆಯೇ ಲೋಕಸಭೆ ಆವರಣದಲ್ಲಿ ಪ್ರತಿಪಕ್ಷಗಳ ಸಂಸದರು ವಿನೂತನ ಮಾದರಿಯ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಯೋಧ್ಯೆ ರಾಮಮಂದಿರದ ದೇಣಿಗೆ ಸಂಗ್ರಹದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು 'ಚಂದಾ ಕಳ್ಳತನ' ಎಂಬ ಶೀರ್ಷಿಕೆಯಡಿ ಕಿರು ನಾಟಕ ಪ್ರದರ್ಶಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ನಾಟಕದಲ್ಲಿ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದ ಪಪ್ಪು ಯಾದವ ಕಾವಿ ವಸ್ತ್ರ ಧರಿಸಿ ಅರ್ಚಕರ ಪಾತ್ರ ನಿರ್ವಹಿಸಿದರು. ಅವರ ಮುಂದೆ ಸಾಂಕೇತಿಕವಾಗಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿತ್ತು. ಸಮಾಜವಾದಿ ಪಕ್ಷದ ಮೊರಾದಾಬಾದ ಸಂಸದೆ ರುಚಿ ವೀರಾ ಸೇರಿದಂತೆ ಹಲವು ಪ್ರತಿಪಕ್ಷಗಳ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಲ್ಲಿಗೆ ಬಂದು ಸಾಂಕೇತಿಕವಾಗಿ ಕಾಣಿಕೆ ಹಣ ನೀಡಿದರು. ಹಣ ಸ್ವೀಕರಿಸಿದ ತಕ್ಷಣ ಪಪ್ಪು ಯಾದವ್ ಆ ಹಣದೊಂದಿಗೆ ಓಡಿಹೋಗಲು ಯತ್ನಿಸಿದಂತೆ ಅಭಿನಯಿಸಿದರು. ಕೂಡಲೇ ಇತರ ಪ್ರತಿಪಕ್ಷಗಳ ಸಂಸದರು ಅವರನ್ನು ತಡೆದು "ಚಂದಾ ಚೋರ್, ಗದ್ದಿ ಛೋಡ್" ಎಂದು ಘೋಷಣೆ ಕೂಗಿದರು. ಈ ದೃಶ್ಯ ಕೆಲಕಾಲ ಸಂಸತ್ ಆವರಣದಲ್ಲಿ ಗಮನ ಸೆಳೆಯಿತು.

ಅಯೋಧ್ಯೆ ರಾಮಮಂದಿರದ ದೇಣಿಗೆ ಸಂಗ್ರಹದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕಿರು ನಾಟಕದ ಮೂಲಕ ರಾಜಕೀಯ ಸಂದೇಶ ನೀಡಲಾಗಿದೆ ಎಂದು ಪ್ರತಿಪಕ್ಷಗಳು ತಿಳಿಸಿವೆ. ಸಂಸತ್ ಆವರಣದಲ್ಲಿ ನಡೆದ ಈ ಪ್ರತಿಭಟನೆಯನ್ನು ವೀಕ್ಷಿಸಲು ಹಲವು ಸಂಸದರು ಹಾಗೂ ಮಾಧ್ಯಮ ಪ್ರತಿನಿಧಿಗಳು ಜಮಾಯಿಸಿದ್ದರು.

ಕಳೆದ ಕೆಲವು ದಿನಗಳಿಂದ ಸಮಾಜವಾದಿ ಪಕ್ಷದ ಸಂಸದರು ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ದಾನಪಾತ್ರೆ ಹಿಡಿದು ಸಂಸತ್ ಆವರಣಕ್ಕೆ ಆಗಮಿಸಿ ಸಾಂಕೇತಿಕವಾಗಿ ದೇಣಿಗೆ ಸಂಗ್ರಹಿಸುವ ಮೂಲಕ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಇತ್ತೀಚೆಗೆ ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಕೂಡ ಇದೇ ರೀತಿಯಲ್ಲಿ ದಾನಪಾತ್ರೆ ಹಿಡಿದು ಇತರ ಸಂಸದರಿಂದ ಸಾಂಕೇತಿಕವಾಗಿ ಕಾಣಿಕೆ ಸಂಗ್ರಹಿಸಿದ್ದರು.

ಶುಕ್ರವಾರ ನಡೆದ ಈ ಕಿರು ನಾಟಕವು ಆ ಸರಣಿ ಪ್ರತಿಭಟನೆಯ ಭಾಗವಾಗಿದ್ದು, ಸಾಂಪ್ರದಾಯಿಕ ಘೋಷಣೆಗಳ ಬದಲಿಗೆ ನಾಟಕೀಯ ಪ್ರದರ್ಶನದ ಮೂಲಕ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ ಪ್ರತಿಪಕ್ಷಗಳ ನಡೆ ಸಂಸತ್ ಆವರಣದಲ್ಲಿ ವಿಶೇಷ ಗಮನ ಸೆಳೆಯಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ