LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಕರ್ನಾಟಕದ ಸರ್ಕಾರಿ ಬಸ್ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ

ಗದಗ: ನೈರುತ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಜೈ ಮಹಾರಾಷ್ಟ್ರ ಎಂದು ನಮೂದಾಗಿರುವಂತ ಟಿಕೆಟ್ ಗಳನ್ನು ಪ್ರಯಾಣಿಕರಿಗೆ ವಿತರಿಸಿದ ಗದಗ ಘಟಕ ಹಾಗೂ ರೋಣಾ ಘಟಕದ ಸಾರಿಗೆ ಬಸ್ ನಲ್ಲಿ ನಡೆದಿದೆ.



ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಇಂದು ಗದಗ ಘಟಕ ಹಾಗೂ ರೋಣಾ ಘಟಕದ ಸಾರಿಗೆ ಬಸ್ ನಲ್ಲಿ ವಿತರಿಸಿರುವಂತ ಟಿಕೆಟ್ ಗಳಲ್ಲಿ ಜೈ ಮಹಾರಾಷ್ಟ್ರ ಎಂಬುದಾಗಿ ಇದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿತರಿಸಿದಂತ ಈ ಟಿಕೆಟ್ ಕಂಡು ಪ್ರಯಾಣಿಕರೇ ದಂಗಾಗಿ ಹೋಗಿದ್ದಾರೆ.



ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಬುದಾಗಿ ನಮೂದಿಸಬೇಕಿದ್ದಂತ ಟಿಕೆಟ್ ಪೇಪರ್ ನಲ್ಲಿ ಜೈ ಮಹಾರಾಷ್ಟ್ರ ಎಂಬುದಾಗಿ ನಮೂದಿಸಿರುವ ರೋಲ್ ನ ಟಿಕೆಟ್ ಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ.



ಟಿಕೆಟ್ ವೈರಲ್ ಆಗುತ್ತಿದಂತೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದ್ದು, ಗದಗ ವಿಭಾಗದ ರೋಣ ಮತ್ತು ಗದಗ ಘಟಕದಲ್ಲಿ ಇಟಿಎಂ ಟಿಕೇಟ್ ಗಳು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಲಾಂಛನ ವಿರುವ ಟಿಕೆಟ್ ಗಳನ್ನು ನೀಡಿರುವ ಬಗ್ಗೆ ಪರಿಶೀಲಿಸಲಾಗಿದೆ.



ಈ ಇಟಿಎಂ ರೋಲ್ ಗಳನ್ನು ಪೂರೈಕೆ ಮಾಡುವ ಕಣ್ತಪ್ಪಿನಿಂದ ಎರಡು ಬಾಕ್ಸ್ ಗಳು ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯವರಿಗೆ ಕಳುಹಿಸುವುದನ್ನು, ನಮ್ಮ ಸಂಸ್ಥೆಗೆ ಪೂರೈಕೆ ಮಾಡಿರುತ್ತಾರೆ. ಇದನ್ನು ಘಟಕಗಳಲ್ಲಿ ಪರಿಶೀಲನೆ ಮಾಡದೇ ನಿರ್ವಾಹಕರಿಗೆ ವಿತರಿಸಿರುತ್ತಾರೆ. ಆ ರೋಲ್ ಗಳನ್ನು ನಿರ್ವಾಹಕರು ನೋಡದೇ ಟಿಕೆಟ್ ನೀಡಿರುತ್ತಾರೆ ಎಂದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ