LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಜಲೀಲ ಕೊಲೆ; ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿ, ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಡಿಸೆಂಬರ್ 24ರಂದು ಮಂಗಳೂರಿನ ಸುರತ್ಕಲ್‍ ನ ಕಾಟಿಪಳ್ಳದಲ್ಲಿ ನಡೆದಿದ್ದ ಅಬ್ದುಲ್​ ಜಲೀಲ ಅವರ ಬರ್ಬರ ಕೊಲೆ ಪ್ರಕರಣದಲ್ಲಿ ದಿ. 27 ರಂದು ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.



28 ವರ್ಷದ ಲಕ್ಷ್ಮೀಶ ದೇವಾಡಿಗ ಎಂಬವನು ಬಂಧಿತ ಆರೋಪಿಯಾಗಿದ್ದು ಇದರೊಂದಿಗೆ ಆರೋಪಗಳ ಬಂಧನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.







ಕೃಷ್ಣಪುರ 4ನೇ ಬ್ಲಾಕ್‌ ನಿವಾಸಿಯಾಗಿರುವ ಲಕ್ಷ್ಮೀಶ ದೇವಾಡಿಗ ಈ ಹಿಂದೆ ಜಲೀಲ ಅಂಗಡಿಗೆ ಹೋಗಿ ಜಗಳವಾಡಿದ್ದ. ಹಿಂದೂ ಧರ್ಮದ ಮಹಿಳೆಯೊಂದಿಗೆ ಜಲೀಲ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಈ ವಿಚಾರಕ್ಕೆ ಆರೋಪಿ ಲಕ್ಷ್ಮೀಶ ದೇವಾಡಿಗ ಅಂಗಡಿಗೆ ಹೋಗಿ ಜಲೀಲನ ಜೊತೆ ಗಲಾಟೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಕ್ಷ್ಮೀಶ ದೇವಾಡಿಗನನ್ನು ಬಂಧನ ಮಾಡಿ ವಿಚಾರಣೆಗೊಳಪಡಿಸಿದ್ದಾರೆ



ಮಾಧ್ಯಮಗಳು ಮೌನ ವಹಿಸಿದ್ದರೂ ಸಹ

ಅಬ್ದುಲ್​ ಜಲೀಲ​ ಕೊಲೆ ಪ್ರಕರಣ​ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಇದೀಗ ಜಲೀಲ್​ ಹತ್ಯೆ ಖಂಡಿಸಿ ಎಸ್ ವೈಎಸ್, ಎಸ್​ಎಸ್​​ಎಫ್​ ಪ್ರತಿಭಟನೆಗಿಳಿದಿವೆ. ಇಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಎಸ್ ವೈಎಸ್, ಎಸ್​ಎಸ್​​ಎಫ್​ ಸಂಘಟನೆಗಳು ಪ್ರತಿಭಟನೆಗಿಳಿದವು. ಜಲೀಲ ಕೊಲೆ ಪ್ರಕರಣದಲ್ಲಿ ತಾರತಮ್ಯ ಆಗಿದೆ ಎಂದು ಪೊಲೀಸ್ ಇಲಾಖೆ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕ್ಲಾಕ್ ಟಾವರ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.



ಮಂಗಳೂರಿನ ಕಾಟಿಪಳ್ಳದ ನಾಲ್ಕನೇ ಬ್ಲಾಕ್​​ನಲ್ಲಿ 40 ವರ್ಷದ‌ ಅಬ್ದುಲ್​ ಜಲೀಲ ಎಂಬ ವ್ಯಕ್ತಿಯನ್ನು ಡಿಸೆಂಬರ 24ರಂದು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಶೈಲೇಶ ಪೂಜಾರಿ, ಸವಿನ ಕಾಂಚನ, ಪವನ ಅಲಿಯಾಸ್ ಪಚ್ಚು ಎನ್ನುವ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.



ಜಲೀಲ್​ ಕೊಲೆ ಬೆನ್ನಲ್ಲೇ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಸುರತ್ಕಲ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು. ಅಲ್ಲದೇ ಮದ್ಯ ಮಾರಾಟವನ್ನೂ ಸಹ ಡಿಸೆಂಬರ್ 29ರ ವರೆಗೆ ನಿಷೇಧಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ