LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕರ್ನಾಟಕ ಪೊಲೀಸರ ಅವಹೇಳನ : ಮರಾಠಿ ಚಿತ್ರದ ನಿರ್ಬಂಧಕ್ಕೆ ಕರವೇ ಒತ್ತಾಯ

ಬೆಳಗಾವಿ: ಗಡಿ ವಿಚಾರವಾಗಿ ಒಂದಲ್ಲ ಒಂದು ರೀತಿ ಕಿತಾಪತಿ ಮಾಡುತ್ತಲೇ ಇರುವ ಎಂಇಎಸ್ ಇದೀಗ ಕರ್ನಾಟಕ ಪೊಲೀಸರನ್ನು ಬೈದಾಡುವ ಸಿನಿಮಾವನ್ನು ಮಾಡಿದ್ದು, ಇಂದು ಮರಾಠಿ ಚಿತ್ರ ಬಾಯ್ಸ- 3 ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.



ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವೆಡೆ ಬಿಡುಗಡೆ ಮಾಡಲು ಎಂಇಎಸ್ ಸಿದ್ಧತೆ ನಡೆಸಿದೆ. ವಿವಾದಾತ್ಮಕ ಚಿತ್ರ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.



ಕನ್ನಡಿಗರಿಗೆ ಪ್ರಚೋದಿಸುವಂತೆ ಮಾಡಲು ವಿವಾದಾತ್ಮಕ ಮರಾಠಿ ಚಲನಚಿತ್ರ ಬಾಯ್-3 ಬಿಡುಗಡೆ ಮಾಡಲಾಗುತ್ತಿದ್ದು, ಇದು ಕೇವಲ ಮನೋರಂಜನಾ ಚಿತ್ರವಾಗಿದ್ದಲ್ಲಿ ನಮ್ಮ ವಿರೋಧವಿರಲಿಲ್ಲ. ಆದರೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿಷಯವನ್ನಿಟ್ಟು ತಯಾರಾಗಿರುವ ಚಿತ್ರವಾಗಿದೆ. ಚಿತ್ರದ ಒಂದು ದೃಶ್ಯದಲ್ಲಿ ಕರ್ನಾಟಕದ ಪೊಲೀಸ್ ಠಾಣೆಗೆ ಬಂದು, ನಮ್ಮ ಪೊಲೀಸರಿಗೆ ನಿಮಗೆ ಕನ್ನಡ ಭಾಷೆಯ ಮೇಲೆ ಅಭಿಮಾನವಿದ್ದರೆ ನಮಗೂ ನಮ್ಮ ಮರಾಠಿ ಭಾಷೆಯ ಮೇಲೆ ದುಪ್ಪಟ್ಟು ಅಭಿಮಾನವಿದೆ, ಅಷ್ಟಕ್ಕೂ ಮರಾಠಿ ಭಾಷೆಯನ್ನು ಬೆಳಗಾವಿಯಲ್ಲಿ ಮಾತನಾಡದಿದ್ದರೆ ಮತ್ತೆಲ್ಲಿ ಮಾತನಾಡಬೇಕು? ಎಂದು ಪ್ರಶ್ನಿಸುವ ದೃಶ್ಯವಿದೆ.



ಆದ್ದರಿಂದ ಈ ಚಿತ್ರ ರಾಜ್ಯದಲ್ಲಿ ಬಿಡುಗಡೆಯಾದರೆ ಕನ್ನಡ, ಮರಾಠಿ ಭಾಷಾ ಬಾಂಧವ್ಯ ಹದಗೆಟ್ಟು ಕಾನೂನು ಸುವ್ಯವಸ್ಥೆ ಹಾಳಾಗುವ ಸಂಭವವಿದೆ. ಬಾಯ್ಸ-3 ಚಿತ್ರ ಬಿಡುಗಡೆಗೆ ನಿರ್ಬಂಧ ವಿಧಿಸುವಂತೆ ಕರವೇ ಕಾರ್ಯಕರ್ತರು ಬೆಳಗಾವಿ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಅವರಿಗೆ ಮನವಿ ಮಾಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ