LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ನಿಷೇಧಾಜ್ಞೆ ಜಾರಿ

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹಾರಾಷ್ಟ್ರ ಭಾಗದಲ್ಲಿ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.



ಗಡಿ ವಿವಾದ ವಿಚಾರವಾಗಿ ಮಹಾವಿಕಾಸ ಅಘಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಡಿಸೆಂಬರ್ 23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



ಮಹಾವಿಕಾಸ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದ್ದು, ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 9ರಿಂದ ಡಿಸೆಂಬರ್ 23ರವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಲ್ಲಾಪುರದಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST