LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇಂದು ಖಗ್ರಾಸ ಚಂದ್ರಗ್ರಹಣದ ದೇವಾಲಯಗಳು ಬಂದ್

ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.



ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಇಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಗ್ರಹಣ ಸ್ಪರ್ಶಕಾಲ, ಮೋಕ್ಷಕಾಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದ್ದು, ದೇವಾಲಯದಲ್ಲಿ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆಯಲಿವೆ.



ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ನಿಮಿಷಾಂಭ ಹಾಗೂ ಶ್ರೀರಂಗನಾಥ ಸ್ವಾಮಿ ದೇವಾಲಯಗಳು, ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇಗುಲ ಬಂದ್ ಆಗಲಿವೆ.



ನಿಮಿಷಾಂಭ ದೇವಾಲಯ ಮಧ್ಯಾಹ್ನ 12 ಗಂಟೆಗೆ ಬಂದ್ ಆಗಲಿದ್ದು, ಸಂಜೆ 7ಗಂಟೆಯವರೆಗೂ ದೇವಾಲಯ ಬಾಗಿಲು ಮುಚ್ಚಲಿದೆ. ಬಳಿಕ ಗ್ರಹಣ ಮೋಕ್ಷದ ಬಳಿಕ ದೇವಾಲಯ ಬಾಗಿಲು ತೆರೆಯಲಿದ್ದು, ಶುದ್ಧಿಕಾರ್ಯ ನಡೆದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.



ಇನ್ನು ಬೆಂಗಳೂರಿನ ಕಾಡುಮಲ್ಲೇಶ್ವರ ದೇವಾಲಯವೂ ಇಂದು ಬಂದ್ ಆಗಲಿದೆ. ಬೆಳಿಗ್ಗೆ 10:30ವರೆಗೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ರುದ್ರಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ. 10:30ರ ಬಳಿಕ ಸಂಜೆ 6:30ರವರೆಗೂ ಗ್ರಹಣ ಮೋಕ್ಷ ಕಾಲದವರೆಗೂ ದೇವಾಲಯದ ಬಾಗಿಲು ಬಂದ್ ಆಗಲಿದೆ. ನಂತರದಲ್ಲಿ ಶುದ್ಧಿಕಾರ್ಯ ನಡೆದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ