LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

'ಕಿತ್ತೂರು ಧಣಿ' ಡಿ.ಬಿ.ಇನಾಮದಾರ ಇನ್ನಿಲ್ಲ

ಬೈಲಹೊಂಗಲ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ  ಡಿ.ಬಿ ಇನಾಮದಾರ ಅವರು ಮಂಗಳವಾರ ಮುಂಜಾನೆ 9 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.



ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನಾಮದಾರ್ ಅವರು  ನ್ಯುಮೋನಿಯಾ, ಲಂಗ್ಸ್ ಇಫೆಕ್ಷನ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.



ಬೆಳಗಾವಿ ಜಿಲ್ಲೆಯ ಕಿತ್ತೂರು ಮತಕ್ಷೇತ್ರದಿಂದ  ಡಿ.ಬಿ.ಇನಾಂದಾರ ಅವರು ಕಾಂಗ್ರೆಸ್ ನಿಂದ 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ 5 ಸಲ‌ ಶಾಸಕರಾಗಿ ಆಯ್ಕೆಯಾಗಿದ್ದರು. ಎಸ್. ಎಂ. ಕೃಷ್ಣ ಸರ್ಕಾರದ ಹಲವು ಮಹತ್ವ ಖಾತೆ ನಿಭಾಯಿಸಿದ್ದರು. ಕೆಲ ವರ್ಷ ರಾಣಿ ಶುಗರ್ಸ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರೂ ಆಗಿದ್ದರು. ಕಳೆದ ತಿಂಗಳು ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಸತೀಶ ಜಾರಕಿಹೊಳಿ ಅವರ ಪತ್ರಿಕಾಗೋಷ್ಠಿಯಲ್ಲಿ ಅವರು ಪಾಲ್ಗೊಂಡಿದ್ದರು.



ಈ ಬಾರಿ ಚುನಟವಣೆಯಲ್ಲಿ ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ ಇನಾಮದಾರ ಅವರು ಕಿತ್ತೂರು ಭಾಗದ ಧಣಿ ಎಂದೇ ಖ್ಯಾತರಾಗಿದ್ದರು.



ನಾಳೆ ಬುಧವಾರ ಅವರ ಸ್ವಗ್ರಾಮ ನೇಗಿನಹಾಳದಲ್ಲಿ ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ಜರುಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST