LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶೃಂಗೇರಿ ಮಠ ಒಡೆದ ಮತ್ತು ಗಾಂಧೀಜಿಯನ್ನು ಕೊಂದಂಥ ಬ್ರಾಹ್ಮಣರ ಬಗ್ಗೆ ಎಚ್ಚರದಿಂದಿರಿ -ಕುಮಾರಸ್ವಾಮಿ

ಬೆಂಗಳೂರು : ಹುಬ್ಬಳ್ಳಿಯ ಸಂಸದ ಪ್ರಹ್ಲಾದ ಜೋಶಿ ತೀರಾ ಅಪಾಯಕಾರಿ, ಅವರು ದಕ್ಷಿಣ ಕರ್ನಾಟಕದ ಬ್ರಾಹ್ಮಣರಂತಲ್ಲ, ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು-ಮೂರು ವಿಧಗಳಿವೆ. ಇವರು ಶೃಂಗೇರಿ ಮಠವನ್ನು ಒಡೆದು, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದ ಬ್ರಾಹ್ಮಣರ ವರ್ಗಕ್ಕೆ ಸೇರಿದವರು, ಅವರ ಕುರಿತು ಜನ ಎಚ್ಚರಿಕೆಯಾಗಿರಿ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.



ಜೆಡಿಎಸ್ ನ ಪಂಚರತ್ನ ಯಾತ್ರೆ ಕುರಿತು ಜೋಶಿ ನೀಡಿದ್ದ "ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ" ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜವು ʼಸರ್ವಜನೋ ಸುಖಿನೋ ಭವಂತುʼ ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ಬ್ರಾಹ್ಮಣ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂಥವರು” ಎಂದು ಟೀಕಿಸಿದ್ದಾರೆ.



ವೀರಶೈವ, ಒಕ್ಕಲಿಗ, ಹಿಂದುಳಿದ ಮತ್ತು ದಲಿತರು ಈ ಬಿಜೆಪಿಯ ಮತ್ತು ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದು ಕುಮಾರಸ್ವಾಮಿ ತಿಳಿಸಿದರು.



ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.





Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ