LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಲಾವಣ್ಯ ಕೊಲೆ: ಚೇತನ್ ಬಂಧನ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಂಗಳೂರು, ಜುಲೈ 17: ಕರಾವಳಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯುವತಿ ಲಾವಣ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚೇತನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಲಾವಣ್ಯ ಹತ್ಯೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಚೇತನ್‌ನ ಪತ್ತೆಗಾಗಿ ವಿಶೇಷ ತಂಡಗಳು ಹಲವು ದಿನಗಳಿಂದ ಶೋಧ ಕಾರ್ಯ ನಡೆಸುತ್ತಿದ್ದವು. ಶುಕ್ರವಾರ ಮುಂಜಾನೆ ಮಂಗಳೂರು ನಗರದ ಹೊರವಲಯದ ವಾಮಂಜೂರು ಸಮೀಪದ ಪಚ್ಚನಾಡಿ ಪ್ರದೇಶದಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಪೊಲೀಸರು ಸುತ್ತುವರೆದಿರುವುದನ್ನು ಅರಿತ ಚೇತನ್, ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲಾವಣ್ಯ ಹತ್ಯೆಯ ಹಿಂದಿನ ನಿಖರ ಕಾರಣ, ಕೃತ್ಯದ ಉದ್ದೇಶ ಹಾಗೂ ಈ ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬ ಕುರಿತು ಆರೋಪಿ ಚೇತರಿಸಿಕೊಂಡ ಬಳಿಕ ಸವಿಸ್ತಾರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಗಂಭೀರವಾದರೂ ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕದೇಶೀ ಪಿಸ್ತೂಲ್ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನುತಿಲಾರಿ–ರಕ್ಕಸಕೊಪ್ಪ ಜಲಾಶಯ ಸಂಪರ್ಕಕ್ಕೆ ಆಗ್ರಹಬೆಳಗಾವಿ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನಸಂಬಂಧಿಕರಿಂದ ಇಬ್ಬರು ಸಹೋದರರ ಬರ್ಬರ ಹತ್ಯೆಜನಬೆಂಬಲ ಸಿಕ್ಕರೆ 2028ರಲ್ಲಿ ನನ್ನ ತಂದೆ ಮುಖ್ಯಮಂತ್ರಿ : ಪ್ರಿಯಾಂಕಾ ಜಾರಕಿಹೊಳಿಭಾರತ ನಾಯಕತ್ವದ ಬೇಜವಾಬ್ದಾರಿಯಿಂದ ಬುಲೆಟ್ ರೈಲು ಯೋಜನೆ ವಿಳಂಬ: ಜಪಾನ್ ಮಾಜಿ ಸಚಿವ ಆರೋಪಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟವಾಂಗ್ಚೂಕ್ ತಂದೆಯ ಉಪವಾಸ ಅಂತ್ಯಗೊಳಿಸಿದ್ದ ಇಂದಿರಾ: ಸೋನಿಯಾ ನೆನಪುಆಂಧ್ರದಲ್ಲಿ ಮತ್ತೆ ಕೊರೊನಾ : 20 ದಿನಗಳಲ್ಲಿ ನಾಲ್ವರ ಸಾವು, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ