LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯಾರ್ಥಿನಿಯ ಅಪಹರಿಸಿ ಪರಾರಿಯಾದ ಉಪನ್ಯಾಸಕ

ಅಥಣಿ: ಪಟ್ಟಣದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರೀತಿ, ಪ್ರೇಮದ ಹುಚ್ಚು ಹಿಡಿಸಿದ ಅದೇ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಯುವತಿಯ ತಂದೆ ಅಥಣಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಕಾಗವಾಡ ತಾಲೂಕಿನ ಉಗಾರ ಗ್ರಾಮದ ಪವನಕುಮಾರ ಶೀಲಗಾರ(28) ಎಂಬ ಅವಿವಾಹಿತ ಉಪನ್ಯಾಸಕ ಅದೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಕಳೆದ ಜ. 8 ರಂದು ಅಪಹರಿಸಿಕೊಂಡು ಎಸ್ಕೇಪ್ ಆಗಿದ್ದ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಪೊಷಕರು ದೂರು ದಾಖಲು ಮಾಡಿದ್ದಾರೆ, 10 ದಿನಗಳು ಕಳೆದರೂ ಇನ್ನೂ ಇವರು ಮರಳಿ ಊರಿಗೆ ಬಂದಿಲ್ಲ, ಪೊಲೀಸರು ಶೋಧನಾ ಕಾರ್ಯದಲ್ಲಿ ತೊಡಗಿದ್ದು, ಇಬ್ಬರ ಮೊಬೈಲ್‌ಗಳು ಸ್ವಿಚ್ ಆಫ್ ಆಗಿವೆ,ವಿದ್ಯಾರ್ಥಿನಿಯರ ಪಾಲಕರು ದಿನನಿತ್ಯ ಮಗಳ ಬರುವಿಕೆಗಾಗಿ ಕಣ್ಣೀರು ಹಾಕುತ್ತಿದ್ದಾರೆ.



ಅಥಣಿ ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು ಉಪನ್ಯಾಸಕ ಹಾಗೂ ವಿದ್ಯಾರ್ಥಿನಿಯ ಪತ್ತೆಗೆ ಮುಂದಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ