LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತ; ಲೋಕಾಯುಕ್ತ ಡಿಎಸ್ ಪಿ ಸಾವು

ವಿಜಯಪುರ : ವಿಜಯಪುರದ ಉಪ ಲೋಕಾಯುಕ್ತ ವರಿಷ್ಠಾಧಿಕಾರಿ ಅರುಣ ನಾಯಕ ಅವರು ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಅವರಿಗೆ 58 ವರುಷ ವಯಸಾಗಿತ್ತು.



ಬುಧವಾರ ಸಂಜೆ ಕೆಲಸದ ಅವಧಿ ಮುಗಿದ ನಂತರ ಯಥಾ ಪ್ರಕಾರ ಸ್ನೇಹಿತರೊಂದಿಗೆ ಅವರು ಬ್ಯಾಡ್ಮಿಂಟನ್ ಆಟವಾಡುತ್ತಿದ್ದರು. ಆಗ ಏಕಾಎಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ವಿಜಯಪುರ ನರ್ಸಿಂಗ್ ಹೋಮಗೆ ಸೇರಿಸಲಾಯಿತು. ಆದರೆ ರಾತ್ರಿ ಸುಮಾರು 8.30ಕ್ಕೆ ಅವರು ಕೊನೆಯುಸಿರೆಳೆದರು. ಅವರನ್ನು ಪರೀಕ್ಷಿಸಿದ ವೈದ್ಯರು ಅವರಿಗೆ ಆಟವಾಡುವಾಗ ಹೃದಯಾಘಾತವಾಗಿತ್ತು ಎಂದು ತಿಳಿಸಿದ್ದಾರೆ.



ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ನಾಯಕ ಅಗಲಿದ್ದಾರೆ. ನಾಯಕ ಅವರ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಅಲ್ಲಿಯೇ ಇದ್ದರು.



ಮಾಹಿತಿ ದೊರೆತ ತಕ್ಷಣ ವಿಜಯಪುರಕ್ಕೆ ಧಾವಿಸಿದ ಎಲ್ಲರೂ ನಾಯಕ ಅವರ ಪಾರ್ಥಿವ ಶರೀರವನ್ನು ಅವರ ಸ್ವಸ್ಥಳವಾದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ತೆಗೆದುಕೊಂಡು ಹೋಗಿ ಗುರುವಾರ ಮುಂಜಾನೆ ಅಂತಿಮ ವಿಧಿ ನಿರ್ವಹಿಸಿದರು. ಲೋಕಾಯುಕ್ತ ಕಚೇರಿಯ ಅನೇಕ ಅವರ ಸಹೋದ್ಯೋಗಿಗಳು ಅಂತಿಮ ವಿಧಿಯಲ್ಲಿ ಭಾಗವಹಿಸಿದ್ದರು.



ಲೋಕಾಯುಕ್ತ  ಡಿಎಸ್ ಪಿ ಆಗಿದ್ದ ನಾಯಕ ಅವರು 17-1-2022 ರಂದು ವಿಜಯಪುರಕ್ಕೆ ವರ್ಗಾವಣೆಯಾಗಿ ಬಂದಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು