LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸದೃಢವಾದ ದೇಹದಲ್ಲಿ ಸದೃಢ ಮನಸ್ಸು -ಮಹೇಶ ಕೋಣಿ

ಬೆಳಗಾವಿ, ಡಿ.೩: ಮಕ್ಕಳ ದೇಹ ಸದೃಢವಾಗಿದ್ದರೆ ಮಾತ್ರ ಅವರ ಮನಸ್ಸು ಸದೃಢವಾಗಿರಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ ಕೋಣಿ ಹೇಳಿದರು.



ನಗರದ ಪ್ರತಿಷ್ಠಿತ ಪೋದಾರ್ ಅಂತರ್ರಾಷ್ಟ್ರೀಯ ಶಾಲೆಯಲ್ಲಿ ಶುಕ್ರವಾರ ನಡೆದ ೧೦ನೇ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.



ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ಸತ್ವಯುತ ಹಾಗೂ ಸಮತೋಲಿತ ಆಹಾರ ನೀಡುವ ಮೂಲಕ ಅವರ ಆರೋಗ್ಯವೃದ್ಧಿಗೆ ಶ್ರಮಿಸಬೇಕೆಂದೂ ಡಾ. ಕೋಣಿ ಕರೆ ನೀಡಿದರು.



ಇನ್ನೋರ್ವ ಅತಿಥಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಬೆಳಗಾವಿಯ ಯೋಗ ಸಾಧಕಿ ಕು. ನಕ್ಷತ್ರ ಶೆಟ್ಟಿ ಅವರು ಮಾತನಾಡಿ, ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಒಮ್ಮೆಲೆ ಆಗುವುದಿಲ್ಲ, ಅದಕ್ಕೆ ಸತತ ಪರಿಶ್ರಮ ಅತ್ಯಗತ್ಯ ಎಂದರು.



ಇದೇ ಸಂದರ್ಭದಲ್ಲಿ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.



ಪೋದಾರ್ ಅಂತಾರಾಷ್ಟ್ರೀಯ ಶಾಲೆಯ ಪ್ರಾಚಾರ್ಯರಾದ ರಾಜ್ ಹುಲಮನಿ, ಉಪ ಪ್ರಾಚಾರ್ಯರಾದ ಸಂಜೀವನಿ ಕಾಳೆ, ಆಡಳಿತಾಧಿಕಾರಿ ಚಂದ್ರಕಾಂತ ದೇಸಾಯಿ ಮತ್ತು ಮುಖ್ಯಾಧ್ಯಾಪಕಿ ಅನುರಾಧಾ ಚವ್ಹಾಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಹಾಜರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ