LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಮಿತಾಬ ಬಚ್ಚನ್ ಗೆ ಭಾರತ ರತ್ನ ನೀಡಲು ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತಾ: ಹಿಂದಿ ನಟ ಅಮಿತಾಬ ಬಚ್ಚನ್ ಅವರಿಗೆ ಭಾರತ ರತ್ನ ಕೊಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಷಯ ಎತ್ತಿದ್ದಾರೆ.





ಕೋಲ್ಕತಾದಲ್ಲಿ ನಡೆದ 28ನೇ ಕೋಲ್ಕತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಮಮತಾ ಬ್ಯಾನರ್ಜಿ ಅಭಿಮಾನಿಗಳೆಲ್ಲರ ಸಮ್ಮುಖದಲ್ಲಿ ”ಅಮಿತಾಬ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ. ಅವರು ಭಾರತದ ಐಕಾನ್. ಅವರಿಗೆ ಭಾರತ ರತ್ನ ನೀಡಬೇಕು” ಎಂದರು.



“ಅಧಿಕೃತವಾಗಿ ಅಲ್ಲದಿದ್ದರೂ ಬಂಗಾಳ, ಅಮಿತಾಬಜಿ ಪರ ಭಾರತ ರತ್ನಕ್ಕಾಗಿ ಧ್ವನಿ ಎತ್ತುತ್ತೇವೆ. ಅವರಿಗೆ ಭಾರತ ರತ್ನ ನೀಡಬೇಕು. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಅವರಿಗೆ ಧನ್ಯವಾದಗಳು ಎಂದಿದ್ದಾರೆ.



ಸಮಾರಂಭದಲ್ಲಿ ಅಮಿತಾಬ ಅವರು “ಪಠಾಣ್‌’ ಸಿನಿಮಾದ “ಬೇಷರಮ್‌ ರಂಗ್‌’ ಹಾಡಿನ ದೃಶ್ಯಗಳ ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿ, ”ಸಿನಿಮಾ ಸೆನ್ಸರ್‌ಶಿಪ್‌ಗಾಗಿ 1952ರಲ್ಲಿ ಸಿನಿಮಾಟೋಗ್ರಾಫ‌ರ್‌ ಕಾಯಿದೆ ರಚಿಸಲಾಯಿತು. ಫಿಲ್ಮ ಸರ್ಟಿಫಿಕಲೇಶನ್‌ ಬೋರ್ಡ‌ ಸಿನಿಮಾ ಸೆನ್ಸಾರ್‌ ಕಾರ್ಯ ನಿರ್ವಹಿಸುತ್ತಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಈಗಲೂ ಪ್ರಶ್ನೆಗಳು ಏಳುತ್ತವೆ” ಎಂದು ಹೇಳಿದರು.



ಇದೇ ವೇಳೆ ಮಾತನಾಡಿದ ನಟ ಶಾರೂಕ‌ ಖಾನ್‌, “ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕತೆ ಹರಡುವುದು ಸಿನಿಮಾಗಳ ಮೇಲೆ ಪರಿಣಾಮ ಬೀರುತ್ತದೆ. ಸಂಕುಚಿತ ಮನೋಭಾವದಿಂದ ವಿಚಾರಗಳನ್ನು ನೋಡಲಾಗುತ್ತಿದೆ. ಜಗತ್ತು ಏನಾದರೂ ಆಗಲಿ, ಆದರೆ ಈಗಲೂ ಸಕಾರಾತ್ಮಕ ವ್ಯಕ್ತಿಗಳು ಜೀವಂತವಾಗಿದ್ದಾರೆ.’ ಎಂದು ಹೇಳಿದ್ದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST