LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮಣಿಪುರ; ಮೋದಿ ಮೌನ, ಶಾ ನಿಷ್ಪ್ರಯೋಜಕ -ರಮೇಶ

ಹೊಸದಿಲ್ಲಿ, ೨೬- ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದು ಗೃಹ ಸಚಿವ ಅಮಿತ ಶಾ ನಿಷ್ಟ್ರಯೋಜಕರಾಗಿದ್ದಾರೆ ಮತ್ತು ಅಲ್ಲಿನ ಮುಖ್ಯಮಂತ್ರಿ ಎನ್‌. ಬಿರೆನ್ ಸಿಂಗ್ ಕಾರ್ಯಹೀನರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ ರಮೇಶ ಹೇಳಿದ್ದಾರೆ.



ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ವರೆಗೂ ಪರಿಸ್ಥಿತಿ ಹತೋಟೆಗೆ ಬಂದಿಲ್ಲ. ಮಣಿಪುರ ಶಾಂತಿಗೆ ಸಂಬಂಧಿಸಿದಂತೆ ಇಲ್ಲಿನ ಹರಕಿಶನ್ ಸಿಂಗ್ ಸುರ್ಜೀತ ಭವನದಲ್ಲಿ ರವಿವಾರ ರಾಷ್ಟ್ರೀಯ ಸಮಾವೇಶ ನಡೆಸಲಾಯಿತು. ಸಮಾವೇಶದಲ್ಲಿ ಭಾಗವಹಿಸಿರುವ ಜೈರಾಮ ರಮೇಶ ಅವರು, ಸಂಘರ್ಷಪೀಡಿತ ಮಣಿಪುರದ ಪರಿಸ್ಥಿತಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.



ಯಾವುದೇ ವಿಚಾರವಾಗಿ ಸರ್ವಸಮ್ಮತಿ ಸೂಚಿಸಲು ಸಾಧ್ಯವಾಗದೇ ಇರಬಹುದು ಆದರೆ ಒಮ್ಮತಕ್ಕೆ ಬರಲು ಸಾಧ್ಯವಿದೆ. ಭಾರತ ಸಂವಿಧಾನ ರಚನೆಯಾಗಿದ್ದೇ ಹೀಗೆ. ಎಲ್ಲರಿಗೂ ಕಿವಿಯಾಗಿ, ಸಂವೇದನಾಶೀಲವಾಗಿದ್ದರೆ ಮಣಿಪುರದಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯವಿದೆ. ಇದು ಸುದೀರ್ಘ ಪ್ರಕ್ರಿಯೆ; ಒಂದು ವಾರದಲ್ಲಿ ಸಾಧ್ಯವಿಲ್ಲ. ಅದಕ್ಕೆ ಒಂದು ತಿಂಗಳು ಅಥವಾ ವರ್ಷಾನುಗಟ್ಟಲೆ ಸಮಯ ಬೇಕು ಎಂದು ಹೇಳಿದರು.



ಮಣಿಪುರದಲ್ಲಿ ಕೂಡಲೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು ಎಂದು ಜೈರಾಮ ರಮೇಶ ಅವರು ಆಗ್ರಹಿಸಿದರು. ಯಾವುದೇ ತಾರತಮ್ಯ ಇಲ್ಲದೇ ನಿರ್ದಾಕ್ಷಿಣ್ಯವಾಗಿ ಎಲ್ಲಾ ಸಶಸ್ತ್ರ ಗುಂಪನ್ನು ನಿಶ್ಯಸ್ತ್ರೀಕರಣಗೊಳಿಸಬೇಕು ಮತ್ತು ನಂಬಿಕೆ, ಸಾಮರಸ್ಯದ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ