LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ದೇಶ ವಿರೋಧಿಗಳನ್ನು ಎನ್ ಕೌಂಟರ್ ಮಾಡಿ : ಶಾಸಕ ಅಭಯ ಪಾಟೀಲ 

ಬೆಳಗಾವಿ : ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆ ತೊಡಗಿದವರ ಮೇಲೆ ಉಗ್ರ ಕ್ರಮ ಆಗಬೇಕು. ಕೆಲವರು ಪಾಕಿಸ್ತಾನ ಜಿಂದಾಬಾದ್ ಅಂತಿದ್ದಾರೆ. ಇಂತವರ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.



ಇಂತಹ ಕೃತ್ಯಗಳಲ್ಲಿ ತೊಡಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬೇಕಾದ ವಿಶೇಷ ಕಾನೂನು ರೂಪಿಸಬೇಕು. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸುವ ಕೆಲಸ ಮಾತ್ರ ಆಗಬಾರದು. ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.



ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವವರಲ್ಲಿ ಅವರದ್ದೇ ಆದ ಅಜೆಂಡಾ ಇರುತ್ತದೆ. ಇವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಾರೆ. ಇಂತವರಿಗೆ ಯಾರು ಆಶ್ರಯ ಕೊಡುತ್ತಾರೋ ಅವರ ಮೇಲೆ ಮೊದಲು ಕ್ರಮ ಆಗಬೇಕು. ರಾಜಕೀಯ ಶಕ್ತಿಗಳೇ ಇಂತವರಿಗೆ ಆಶ್ರಯ ಕೊಡುತ್ತಿರುವುದಾಗಿ ಗಂಭೀರ ಆರೋಪ ಮಾಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ