LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ ಬೆನಕೆ ಭೂಮಿ ಪೂಜೆ 

ಬೆಳಗಾವಿ : ಕಾಳಿ ಅಂರಾಯಿ, ಕ್ಲಬ್ ರಸ್ತೆ ಹಾಗೂ ಶಿವಾಜಿ ನಗರದ ವಿವಿಧ ಪ್ರದೇಶಗಳಲ್ಲಿ ಲೋಕೊಪಯೋಗಿ ಇಲಾಖೆಯಡಿ 3 ಕೋಟಿಗಳ ವೆಚ್ಚದಲ್ಲಿ ರಸ್ತೆ ಡಾಂಬರಿಕರಣ, ಚರಂಡಿ, ಒಳಚರಂಡಿ, ಪೇವರ್ಸ ಹಾಗೂ ಇತರೆ ಅಭಿವೃಧ್ದಿ ಕಾಮಗಾರಿಗಳಿಗೆ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.



ಈ ವೇಳೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ವತಿಯಿಂದ ಕಾಳಿ ಅಂಬರಾಯಿ ಹಾಗೂ ಕ್ಲಬ್ ರಸ್ತೆ ಪ್ರದೇಶದಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ಹಾಗೂ ಶಿವಾಜಿ ನಗರದ ವಿವಿಧ ಪ್ರದೇಶಗಳಲ್ಲಿ ರೂ. 2.0 ಕೋಟಿಗಳ ವೆಚ್ಚದಲ್ಲಿ ನಗರದಲ್ಲಿ ರಸ್ತೆ, ಚರಂಡಿ, ಒಳಚರಂಡಿ, ಪೇವರ್ಸ ಅಳವಡಿಸುವ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ.



ಕಾಳಿ ಅಮರಾಯಿ ಹಾಗೂ ಕ್ಲಬ್ ರಸ್ತೆ ಪ್ರದೇಶದ ಸ್ಥಳಿಯರು ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಪ್ರಸ್ತಾಪಿಸಿದ್ದು, ಈ ಬಗ್ಗೆ ಎರಡೂ ಮೂರು ದಿನಗಳಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.



ಈ ಸಂದರ್ಭದಲ್ಲಿ ಶಾಸಕರೊಂದಿಗೆ ನಗರ ಸೇವಕರಾದ ಶಿವಾಜಿ ಮಂಡೋಳಕರ, ಮಾಡಿವಾಲೆ, ಬಾಬಾಜನ ಮತವಾಲೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸ್ಥಳಿಯರಾದ ಗಜಾನನ ಮಿಸಾಳೆ, ರಾಹುಲ ಖುಡೆ, ಸಂಜಯ ಭಂಡಾರಿ, ವಿಕ್ರಮ ಕಿಲ್ಲೆಕರ, ಆಶೋಕ ಥೋರಾಟ, ವಿಜಯ ಕೋಡಗನೂರ, ರಘು ಉರ್ಬಿನ, ವಿಜಯ ಪವಾರ, ಯಲ್ಲಪ್ಪ ಖಾಂಡೇಕರ, ಗುತ್ತಿಗೆದಾರರಾದ ಎನ್. ಎಸ್. ಚೌಗುಲೆ, ವಿಜಯ ಕುಪಾಟಿ ಹಾಗೂ ಇತರ ಸ್ಥಳೀಯರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ