LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

17ಕ್ಕೂ ಹೆಚ್ಚು ಸೇತುವೆಗಳು ಜಲಾವೃತ 

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಣಮಳೆಯಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂತಾಗಿದೆ. ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 17ಕ್ಕೂ ಸೇತುವೆಗಳು ಮುಳುಗಡೆಯಾಗಿವೆ.



ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯ ತುಂಬಿ ಹರಿಯುತ್ತಿದೆ. ಪರಿಣಾಮ ಜಲಾಶಯದಿಂದ 27,000 ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡಲಾಗಿದ್ದು, ಗೋಕಾಕ್, ನಿಪ್ಪಾಣಿ ಸೇರಿದಂತೆ ಬೆಳಗಾವಿಯ ಹಲವೆಡೆಗಳಲ್ಲಿ ಪ್ರವಾಹವುಂಟಾಗಿದೆ.



ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಾರ್ಕೆಟ್ ಗಳು ಮುಳುಗಡೆಯಾಗಿದ್ದು, ಉಪ್ಪಾರ ಓಣಿ, ಹಳೆ ದನದ ಪೇಟೆ ಹಾಗೂ ತಾಲೂಕಿನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.



ಜಿಲ್ಲೆಯಲ್ಲಿ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ಸೇತುವೆಗಳಾದ ಗೊಕಾಕ್-ಸಿಂಗಾಪುರ, ಗೊಕಾಕ್ -ಚಿಗಡೊಳ್ಳಿ, ಮುಡಲಗಿ-ಸುಣದೊಳ್ಳಿ, ಕಮಲದಿನಿ-ಹುಣಶಾಡ, ಕುಲಗೊಡ-ಔರಾದಿ, ಡವಳೇಶ್ವರ-ಮಾಹಾಲಿಂಗಪುರ, ಸಿಂಗಳಾಪುರ-ಹುಕ್ಕೇರಿ, ಹುಕ್ಕೇರಿ-ನೋಗಿನಾಳ, ಅರ್ಜುನವಾಡ-ಕುರಣಿ, ಸಂಕೇಶ್ವರ-ಯಲ್ಮರಡಿ-ಕುರಣಿ, ಸದಲಗಾ-ಬಜವಾಡಿ-ನಿಪ್ಪಾಣಿ, ಬೋಜ-ಕಾರಜಗ, ಸಿದ್ನಾಳ-ಅಕ್ಕೋಳ, ಭೀವಶಿ-ಜತ್ರಾಟ ಸೇರಿದಂತೆ 17ಕ್ಕೂ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ.



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ