LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿ ರೈಲಿನಲ್ಲಿ ಕೊಲೆ 

ಹುಬ್ಬಳ್ಳಿ : ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ನಡೆದಿದೆ.



ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ರೈಲು ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ.



ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿ , ಹತ್ಯೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST