LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮೈಸೂರು, ಹುಬ್ಬಳ್ಳಿ, ಬೆಳಗಾವಿ ನವೋತ್ಪಾದನಾ ಹಬ್: 5 ಲಕ್ಷ ಉದ್ಯೋಗದ ನಿರೀಕ್ಷೆ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ನಾವೀನ್ಯತೆಯನ್ನು ಉತ್ತೇಜಿಸುವ 1,000 ಕೋಟಿ ರೂ. ವೆಚ್ಚದ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್) ವನ್ನು ರಾಜ್ಯ ಸರ್ಕಾರ ಅನಾವರಣಗೊಳಿಸಿದೆ. ಇದರಿಂದ 5 ಲಕ್ಷ ಉದ್ಯೋಗ ಸೃಷ್ಟಿಸುವ ಅವಕಾಶವಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.



ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೃಢವಾದ ನವೋದ್ಯಮ ಪರಿಸರ ವ್ಯವಸ್ಥೆಗಳನ್ನು ನಿರ್ಮಿಸಲು ವಿನ್ಯಾಸಗೊಳಿಸಲಾದ ಮಹತ್ವದ ಕಾರ್ಯಕ್ರಮ ಇದಾಗಿದೆ. ಐಟಿಬಿಟಿ ಇಲಾಖೆ ಲೀಪ್ ಯೋಜನೆಯನ್ನು ಮೈಸೂರು – ಚಾಮರಾಜನಗರ, ಮಂಗಳೂರು – ಉಡುಪಿ, ಹುಬ್ಬಳ್ಳಿ – ಬೆಳಗಾವಿ – ಧಾರವಾಡ, ತುಮಕೂರು, ಕಲಬುರಗಿ ಮತ್ತು ಶಿವಮೊಗ್ಗ ಮುಂತಾದ ಕ್ಲಸ್ಟರ್‌ಗಳಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ನವೋತ್ಪಾದನಾ ಹಬ್‌ಗಳಾಗಿ ಪರಿವರ್ತಿಸಿ ರೂಪಾಂತರಗೊಳಿಸಲಿದೆ ಎಂದರು.



ಬೆಂಗಳೂರು ವಿಶ್ವಮಟ್ಟದಲ್ಲಿ ಪ್ರಸಿದ್ಧ ತಂತ್ರಜ್ಞಾನ ಕೇಂದ್ರವಾಗಿದ್ದು, ಸ್ಟಾರ್ಟ್ಅಪ್‌ ಬ್ಲಿಂಕ್ ಸೂಚ್ಯಂಕ 2025 ಹಾಗೂ ಸ್ಟಾರ್ಟ್ಅಪ್ ಜೀನೋಮ್ 2025ರಲ್ಲಿ ವಿಶ್ವದಾದ್ಯಂತ ಕ್ರಮವಾಗಿ 10ನೇ ಮತ್ತು 14ನೇ ಸ್ಥಾನ ಪಡೆದಿದೆ. ಮೈಸೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉದ್ಯಮಿಗಳನ್ನು ಸಬಲೀಕರಣಗೊಳಿಸಿದರೆ ರಾಜ್ಯದ ನಿಜವಾದ ಸಾಮರ್ಥ್ಯವು ಅನಾವರಣಗೊಳ್ಳುತ್ತದೆ. ಮುಂದಿನ 5 ವರ್ಷಗಳ ಕಾಲಮಿತಿಯಲ್ಲಿ ಅನುಷ್ಠಾನವಾಗಲಿದೆ ಎಂದರು.



1100 ನವೋದ್ಯಮ ಉತ್ತೇಜನ: ರಾಜ್ಯದಲ್ಲಿ ಈಗಾಗಲೇ 1100 ಸ್ಟಾರ್ಟ್ಅಪ್‌ಗಳಿಗೆ ಇಲಾಖೆ ಉತ್ತೇಜನ ಕೊಟ್ಟಿದೆ. ಕರ್ನಾಟಕ ನವೋದ್ಯಮ ಬೌಂಡರಿ ಸ್ಥಾಪಿಸುವ ಮೂಲಕ ವಿವಿಧ ಏಳೆಂಟು ಕ್ಷೇತ್ರಗಳಿಗೆ ತಂತ್ರಜ್ಞಾನ ಆಧಾರಿತ ಅನ್ವೇಷಣೆಗೆ ಆದ್ಯತೆ ಕೊಡಲಾಗುತ್ತದೆ. ಇದರಲ್ಲಿ ಸ್ಥಳೀಯ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳುವ ಮೂಲಕ, ಸಂಶೋಧನೆಗೆ ವಿದೇಶಗಳ ನೆರವು ಪಡೆಯಲು ಅವಕಾಶವಿದೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ