LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಾಗೇಂದ್ರ ಕಣ್ಣೀರು ಬಿಜೆಪಿಯನ್ನೇ ನಾಶ ಮಾಡಲಿದೆ: ಮಧು ಬಂಗಾರಪ್ಪ

ಬೆಂಗಳೂರು, ಆ. 29: ಅನಗತ್ಯ ಆರೋಪಗಳಿಂದಾಗಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಹಾಕಿದ ಕಣ್ಣೀರು ರಾಜ್ಯದಲ್ಲಿ ಬಿಜೆಪಿಯನ್ನೇ ನಾಶ ಮಾಡಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ದಲಿತ ಹಾಗೂ ಪರಿಶಿಷ್ಟ ಜಾತಿಯ ನಾಯಕರಾಗಿರುವ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ. ನಾಗೇಂದ್ರ ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಆರೋಪಗಳನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಬಿಜೆಪಿ ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಮಧು ಬಂಗಾರಪ್ಪ ಎಚ್ಚರಿಸಿದರು.

“ರಾಜಕಾರಣದಲ್ಲಿ ನಾಗೇಂದ್ರ ನನಗಿಂತ ಹಿರಿಯರು. ದಲಿತ ಹಾಗೂ ಪರಿಶಿಷ್ಟ ಜಾತಿಯ ನಾಯಕರು ರಾಜಕೀಯವಾಗಿ ಬೆಳೆಯುತ್ತಿರುವುದನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ನಾಗೇಂದ್ರ ನಿರಪರಾಧಿಯಾಗಿದ್ದಾರೆ. ತನಿಖಾ ವರದಿಗಳನ್ನು ಪರಿಶೀಲಿಸಿ, ಚರ್ಚಿಸಿದ ಬಳಿಕ ಅವರ ಮೇಲಿನ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ತಿಳಿದುಬಂದಿದೆ. ನಾಲ್ಕು ಬಾರಿ ಗೆದ್ದಿರುವ ದಲಿತ ನಾಯಕನ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ ನಾಗೇಂದ್ರ ಅವರಿಗೆ ಮಾತ್ರವಲ್ಲದೆ ತಳ ಸಮುದಾಯಗಳಿಗೂ ನೋವುಂಟು ಮಾಡಿದೆ ಎಂದು ಅವರು ಹೇಳಿದರು.

ನಾಗೇಂದ್ರ ಅವರ ವಿಚಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿದ ಮಧು ಬಂಗಾರಪ್ಪ, “ಆರ್. ಅಶೋಕ್ ಅವರು ನಾಗೇಂದ್ರ ವಿಚಾರದಲ್ಲಿ ವಾದ ಮಾಡಲು ಸಿಬಿಐ ಅಧಿಕಾರಿಯೇ? ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತವೆ. ಮುಂದೊಂದು ದಿನ ಅಶೋಕ್ ಅವರ ಬುಡಕ್ಕೂ ಯಾವುದಾದರೂ ವಿಷಯ ಬಂದಾಗ ಬಿಜೆಪಿಯ ಬಣ್ಣ ಏನೆಂಬುದು ಅವರಿಗೆ ತಿಳಿಯುತ್ತದೆ” ಎಂದು ವ್ಯಂಗ್ಯವಾಡಿದರು.

ನಾಗೇಂದ್ರ ಅವರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ನಾಯಕರು ಸಂಭ್ರಮಿಸುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. “ಇವರಷ್ಟು ಸಾಚಾಗಳು ಬೇರೆ ಯಾರೂ ಇಲ್ಲ ಎಂಬ ರೀತಿಯಲ್ಲಿ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಕಲಿ ಸಹಿ ವಿಚಾರವನ್ನು ಮರೆತಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಮೊದಲು ಕುಮಾರಸ್ವಾಮಿ ವಿರುದ್ಧ ಪಾದಯಾತ್ರೆ ಮಾಡಲಿ

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರದಲ್ಲಿಯೂ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಮೂರು ವರ್ಷಗಳಾಗಿದ್ದರೂ ರಾಜ್ಯಪಾಲರು ಇನ್ನೂ ಅನುಮತಿ ನೀಡಿಲ್ಲ. ಈಗ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ವಿನಾಯಿತಿ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

“ಅವರಿಗೆ ಒಂದು ನ್ಯಾಯ, ನಮಗೆ ಒಂದು ನ್ಯಾಯವೇ? ಮೊದಲು ಬಿಜೆಪಿ-ಜೆಡಿಎಸ್ ನಾಯಕರು ಕುಮಾರಸ್ವಾಮಿ ವಿರುದ್ಧ ಪಾದಯಾತ್ರೆ ಮಾಡಲಿ” ಎಂದು ಅವರು ವ್ಯಂಗ್ಯವಾಡಿದರು.

ಚರ್ಚೆಗೆ ಅವಕಾಶವಿದ್ದರೂ ವಿಪಕ್ಷಗಳಿಂದ ಅಡ್ಡಿ: ಆರೋಪ

ಮುಂಗಾರು ಅಧಿವೇಶನದಲ್ಲಿ ನಾಗೇಂದ್ರ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನೋಟಿಸ್ ನೀಡಿದ್ದರೆ ಸರ್ಕಾರ ಚರ್ಚೆಗೆ ಸಿದ್ಧವಿತ್ತು. ಆದರೆ, ಸೂಕ್ತ ಚರ್ಚೆಗೆ ಮುಂದಾಗದೆ ರಾಜಕೀಯ ದುರುದ್ದೇಶದಿಂದ ಸದನದ ಕಲಾಪಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮಧು ಬಂಗಾರಪ್ಪ ಆರೋಪಿಸಿದರು.

“ನೋಟಿಸ್ ನೀಡಿ, ಸೂಕ್ತ ಚರ್ಚೆ ನಡೆಸಿ ಎಂದು ಸರ್ಕಾರವೇ ಆಹ್ವಾನ ನೀಡಿತ್ತು. ಆದರೆ ವಿಪಕ್ಷಗಳು ಚರ್ಚೆಗೆ ಬರದೆ ಸದನದ ಸಮಯವನ್ನು ಹಾಳು ಮಾಡಿದರು. ಬರಗಾಲ, ಕಾವೇರಿ ನೀರಿನ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸೇರಿದಂತೆ ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿತ್ತು. ಆದರೆ, ಇಲ್ಲದ ವಿಷಯವನ್ನು ಮುಂದಿಟ್ಟುಕೊಂಡು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದರು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಕ್ಕಮ್ ಪ್ರಕಾಶ ಬೆಳಗಾವಿ, ಭೂಷಣ ಬೊರಸೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕಮಹಾರಾಷ್ಟ್ರದ ಸರ್ಕಾರಿ ಶಾಲೆಯಲ್ಲಿ ಅವಧಿ ಮೀರಿದ ಆಹಾರ ಪತ್ತೆ₹22,006 ಕೋಟಿ ಸಾಲಕ್ಕೆ ₹6 ಕೋಟಿ ಮರುಪಾವತಿ: ವಿದೇಶಿ ಹೂಡಿಕೆಗೆ ಸುಭಾಷ ಚಂದ್ರ ಸಜ್ಜುಭೂಸ್ವಾಧೀನದಲ್ಲಿ ಮಾನಸಿಕ ನಷ್ಟಕ್ಕೂ ಪರಿಹಾರ ಪಡೆಯುವ ಹಕ್ಕು: ಹೈಕೋರ್ಟನಾಗೇಂದ್ರ ಕಣ್ಣೀರು ಬಿಜೆಪಿಯನ್ನೇ ನಾಶ ಮಾಡಲಿದೆ: ಮಧು ಬಂಗಾರಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಈಶ್ವರ ಖಂಡ್ರೆಬಿಜೆಪಿ ದೇಶದ ಅತಿ ದೊಡ್ಡ ಸಮಸ್ಯೆ: ಅಖಿಲೇಶ ಯಾದವನ್ಯಾಯಾಧೀಶರ ನೇಮಕಾತಿಯಲ್ಲಿ ಕಾರ್ಯಾಂಗದ ಹಸ್ತಕ್ಷೇಪ: ಎಸ್. ಮುರಳೀಧರ ಕಳವಳನೇಪಾಳ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ ಗೋಪಿ ಸೆಟ್ಟಿ ನಾಪತ್ತೆ₹22,006 ಕೋಟಿ ಸಾಲಕ್ಕೆ ಕೇವಲ ₹6.5 ಕೋಟಿ ಪಾವತಿಗೆ ಬಿಜೆಪಿ ನಿಕಟ ಸುಭಾಷ ಚಂದ್ರಗೆ ಅನುಮತಿ