LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ; ಆಪ್ ಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ

ಹೊಸದಿಲ್ಲಿ, ೯- ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. ಗುಜರಾತಿನಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದ ಆಮ್ ಆದ್ಮಿ ಪಾರ್ಟಿ ಕೇವಲ ಐದು ಸ್ಥಾನಗಳಲ್ಲಿ ಗೆದ್ದಿದ್ದು, ಇದರ ಮಧ್ಯೆಯೂ ಮಹತ್ತರ ಸಾಧನೆ ಮಾಡಿದೆ.



ಆಮ್ ಆದ್ಮಿ ಪಾರ್ಟಿ ಅಸ್ತಿತ್ವಕ್ಕೆ ಬಂದ ಕೇವಲ 10 ವರ್ಷಗಳಲ್ಲಿ ಈಗ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಳ್ಳಲಿದ್ದು, ಸೋಲಿನ ನಡುವೆಯೂ ಅರವಿಂದ ಕೇಜ್ರಿವಾಲ್ ಅವರ ಪಕ್ಷಕ್ಕೆ ಖುಷಿ ಸಿಕ್ಕಿದೆ. ಆಮ್ ಆದ್ಮಿ ಪಾರ್ಟಿ ಈಗಾಗಲೇ ದೆಹಲಿ ಹಾಗೂ ಪಂಜಾಬನಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ನಡೆಸುತ್ತಿದ್ದು, ಗೋವಾದಲ್ಲಿ ಇಬ್ಬರು ಶಾಸಕರನ್ನು ಹೊಂದಿದೆ.



ಇದೀಗ ಗುಜರಾತಿನಲ್ಲಿ ಐವರು ಶಾಸಕರಾಗಿ ಆಯ್ಕೆಯಾಗಿದ್ದು, ಯಾವುದೇ ಒಂದು ಪಕ್ಷ ರಾಷ್ಟ್ರೀಯ ಸ್ಥಾನಮಾನ ಪಡೆಯಬೇಕಾದರೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತಲಾ ಶೇಕಡ 6ಕ್ಕಿಂತ ಅಧಿಕ ಮತ ಅಥವಾ ತಲಾ ಎರಡು ಶಾಸಕರನ್ನು ಹೊಂದಿರಬೇಕಾಗುತ್ತದೆ. ಇದೀಗ ಗುಜರಾತ್ ಗೆಲುವಿನೊಂದಿಗೆ ಈ ಮಾನದಂಡವನ್ನು ಆಮ್ ಆದ್ಮಿ ಪಕ್ಷ ಈಗ ಪೂರೈಸಿರುವ ಕಾರಣ ಇದೀಗ ಅದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ