LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ತೆ ಹೆಚ್ಚಳ ಘೋಷಣೆ

ಬೆಂಗಳೂರು, ಮೇ 11 : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ತೆ ದರವನ್ನು ಮೂಲ ವೇತನದ ಹಾಲಿ ಶೇ.14.25ರಿಂದ ಶೇ.15.75ಕ್ಕೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದ್ದು, ಪ್ರಸಕ್ತ ಸಾಲಿನ ಜ.1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ರಾಜ್ಯ ಸರಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು ಹಾಗೂ ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ನೌಕರರು ಮತ್ತು ಕುಟುಂಬ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ತೆ ಹೆಚ್ಚಳದ ಲಾಭ ದೊರೆಯಲಿದೆ.

ಇವರಿಗೆ ಮೂಲ ನಿವೃತ್ತಿ ವೇತನ ಹಾಗೂ ಕುಟುಂಬ ನಿವೃತ್ತಿ ವೇತನದ ಮೇಲಿನ ತುಟ್ಟಿಭತ್ತೆ ದರವನ್ನು ಶೇ.14.25ರಿಂದ ಶೇ.15.75ಕ್ಕೆ ಏರಿಕೆ ಮಾಡಲಾಗಿದ್ದು, ಇದು ಸಹ ಜ.1ರಿಂದ ಜಾರಿಗೆ ಬರಲಿದೆ.

ಯುಜಿಸಿ, ಎಐಸಿಟಿಇ ಹಾಗೂ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರು, ಸರಕಾರ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರು ಹಾಗೂ ಸರಕಾರದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಪೂರ್ಣಾವಧಿ ನೌಕರರಿಗೂ ಈ ಆದೇಶ ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ ಮತ್ತು ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರು ಹಾಗೂ ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಸರಕಾರ ತಿಳಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST