LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕತ್ತಿ ರಾಜೀನಾಮೆ

ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಹುಕ್ಕೇರಿ ಬಿಜೆಪಿ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದಾರೆ.



ಶುಕ್ರವಾರ ಸಂಜೆ ಅವರು ರಾಜೀನಾಮೆ ನೀಡಿದ್ದು ಕೆಲಸದ ಒತ್ತಡದಿಂದ ಹಾಗೂ ಹುಕ್ಕೇರಿ ಮತ ಕ್ಷೇತ್ರದ ಜನರ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಕಾರ್ಖಾನೆಯ ಅಧ್ಯಕ್ಷ ಸ್ಥಾನ ನಿಭಾಯಿಸಲು ತೊಂದರೆ ಆಗುತ್ತಿರುವುದರಿಂದ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.



ಸೆಪ್ಟೆಂಬರ್ 23ರಂದು ಕಾರ್ಖಾನೆ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಖಾಸಗಿಯವರಿಗೆ ನಡೆಸಲು ಕೊಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ಆಡಳಿತ ಮಂಡಳಿಯ ಹೆಚ್ಚಿನ ಸದಸ್ಯರಿಂದ ವಿರೋಧ ವ್ಯಕ್ತವಾಗಿತ್ತು. ಅಂದಿನಿಂದ ಸಾರ್ವಜನಿಕ ವಲಯದಲ್ಲಿ ಈ ಕುರಿತು ಚರ್ಚೆಗಳು ಆರಂಭವಾಗಿದ್ದು ಈ ನಡುವೆ ಶುಕ್ರವಾರ ನಿಖಿಲ್ ಕತ್ತಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು