LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೆಪೊ ದರದಲ್ಲಿ ಬದಲಾವಣೆ ಇಲ್ಲ

ಮುಂಬೈ, ಜೂ. 5 : ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಏರುತ್ತಿರುವ ಕಚ್ಚಾ ತೈಲ ಬೆಲೆಗಳ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇ 5.25ರಲ್ಲೇ ಮುಂದುವರಿಸಲು ಶುಕ್ರವಾರ ತೀರ್ಮಾನಿಸಿದೆ.

ಆರ್‌ಬಿಐ ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ ಗವರ್ನರ್ ಸಂಜಯ್ ಮಲ್ಹೋತ್ರಾ, ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ಉದ್ವಿಗ್ನತೆ, ಕಚ್ಚಾ ತೈಲ ಬೆಲೆಗಳ ಏರಿಕೆ ಹಾಗೂ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳನ್ನು ಗಮನದಲ್ಲಿಟ್ಟುಕೊಂಡು ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ, ಪ್ರಸಕ್ತ ಹಣಕಾಸು ವರ್ಷದ ದೇಶದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರದ ಅಂದಾಜನ್ನು ಆರ್‌ಬಿಐ ಪರಿಷ್ಕರಿಸಿದ್ದು, ಹಿಂದಿನ ಅಂದಾಜಿಗಿಂತ ಕಡಿಮೆ ಮಾಡಿ ಶೇ 6.6ಕ್ಕೆ ನಿಗದಿಪಡಿಸಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿನ ಅನಿಶ್ಚಿತತೆ, ವಾಣಿಜ್ಯ ಉದ್ವಿಗ್ನತೆ ಮತ್ತು ಇಂಧನ ಬೆಲೆಗಳ ಏರಿಳಿತದ ಪರಿಣಾಮ ದೇಶದ ಆರ್ಥಿಕ ಬೆಳವಣಿಗೆಯ ಮೇಲೂ ಬೀಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಯ ನಿಲುವು ತಾಳಲಾಗಿದೆ ಎಂದು ಆರ್‌ಬಿಐ ಅಭಿಪ್ರಾಯಪಟ್ಟಿದೆ.

ರೆಪೊ ದರದಲ್ಲಿ ಬದಲಾವಣೆ ಇಲ್ಲದಿರುವುದರಿಂದ ಬ್ಯಾಂಕ್‌ಗಳ ಸಾಲ ಹಾಗೂ ಠೇವಣಿ ಬಡ್ಡಿದರಗಳಲ್ಲಿ ತಕ್ಷಣದ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಹಣದುಬ್ಬರ, ಜಾಗತಿಕ ಆರ್ಥಿಕ ಬೆಳವಣಿಗೆ ಹಾಗೂ ಕಚ್ಚಾ ತೈಲ ಮಾರುಕಟ್ಟೆಯ ಸ್ಥಿತಿಗತಿಗಳನ್ನು ಆಧರಿಸಿ ಆರ್‌ಬಿಐ ತನ್ನ ಮುಂದಿನ ನೀತಿಯನ್ನು ರೂಪಿಸುವ ನಿರೀಕ್ಷೆಯಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ